ಶಶಿ ತರೂರ್ 
ದೇಶ

ಸಿಎಎಗೆ ವಿದ್ಯಾರ್ಥಿಗಳ ಅಸಮ್ಮತಿ ನನ್ನಲ್ಲಿ ಭರವಸೆ ಮೂಡಿಸಿದೆ: ಥಿಂಕ್ ಎಡುನಲ್ಲಿ ಶಶಿ ತರೂರ್

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ವಿರೋಧಿಸಿ ಇತ್ತೀಚಿಗೆ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಮತ್ತು ವಿವಾದಾತ್ಮಕ ಕಾಯ್ದೆಗೆ ಸಮ್ಮತಿ ನೀಡದಿರುವುದು...

ಚೆನ್ನೈ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ವಿರೋಧಿಸಿ ಇತ್ತೀಚಿಗೆ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಮತ್ತು ವಿವಾದಾತ್ಮಕ ಕಾಯ್ದೆಗೆ ಸಮ್ಮತಿ ನೀಡದಿರುವುದು ನನ್ನಲ್ಲೂ ಭರವಸೆ ಮೂಡಿಸಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಬುಧವಾರ ಹೇಳಿದ್ದಾರೆ.

ಇಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಥಿಂಕ್ ಎಡು ಕಾಂಕ್ಲೇವ್ ನಲ್ಲಿ ಭಾಗವಹಿಸಿ ಮಾತನಾಡಿದ ಶಶಿ ತರೂರ್ ಅವರು, ವಿದ್ಯಾರ್ಥಿಗಳು ತಮ್ಮದೇ ಆದ ವಿಚಾರಧಾರೆಯನ್ನು ಹೊಂದಿದ್ದಾರೆ. ಅವರನ್ನು ಮುನ್ನಡೆಸಲು ಯಾವುದೇ ರಾಜಕಾರಣಿಗಳ ಅಗತ್ಯವಿಲ್ಲ. ಏಕೆಂದರೆ ಅವರೆಲ್ಲರೂ ಹೃದಯದಿಂದ ಮತ್ತು ನಿಶ್ಚಿತವಾಗಿ ಮಾತನಾಡುತ್ತಿದ್ದಾರೆ ಎಂದರು.

"ಪ್ರಜಾಪ್ರಭುತ್ವವು ಒಂದು ಪ್ರಕ್ರಿಯೆ, ಅದೊಂದು ಕಾರ್ಯಕ್ರಮ ಅಲ್ಲ ಮತ್ತು ಅದು ಖಂಡಿತವಾಗಿಯೂ ಚುನಾವಣೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಪ್ರಜಾಪ್ರಭುತ್ವಕ್ಕೆ ನಿರಂತರ ನಾಗರಿಕರ ಭಾಗವಹಿಸುವಿಕೆಯ ಅಗತ್ಯವಿರುತ್ತದೆ. ಇದು ನಡೆಯುತ್ತಿರುವ ಸಂಭಾಷಣೆಯಾಗಿದೆ. ಸರ್ಕಾರ ಒಂದೇ ಎಲ್ಲ ಉತ್ತರಗಳನ್ನು ಹೊಂದಲು ಸಾಧ್ಯವಿಲ್ಲ. ಅವರು ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ನಾವು ಏನು ಬೇಕಾದರೂ ಮಾಡಬಹುದು ಎಂದು ಭಾವಿಸುವುದು ತಪ್ಪು ಎಂದಿದ್ದಾರೆ.

"ಬುದ್ಧನಿಂದ ಅಂಬೇಡ್ಕರ್ ವರೆಗೆ, ಭಿನ್ನಮತೀಯರು ಯಾವಾಗಲೂ ನಮ್ಮ ಇತಿಹಾಸದ ಒಂದು ಭಾಗವಾಗಿದ್ದಾರೆ ಮತ್ತು ಅದರಲ್ಲಿ ಒಂದು ಪವಿತ್ರ ಸ್ಥಳವಿದೆ. ಇತ್ತೀಚಿನ ದಿನಗಳಲ್ಲಿ ನಾವು ದೇಶದ ಹಲವು ಭಾಗದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿದ್ದೇವೆ. ಈ ಮೂಲಕ ವಿಶ್ವದ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದೇವೆ. ಕಾಶ್ಮೀರದಲ್ಲಿ ಐದು ತಿಂಗಳ ಕಾಲ ಸಂವಹನ ದಿಗ್ಬಂಧನ ವಿಧಿಸಲಾಗಿತ್ತು. ಅಸ್ಸಾಂನಲ್ಲಿ ಐದು ದಿನಗಳವರೆಗೆ ಮತ್ತು ದೆಹಲಿಯಲ್ಲಿ ಐದು ಗಂಟೆಗಳವರೆಗೆ ಸಂವಹನ ಸ್ಥಗಿತಗೊಳಿಸಲಾಗಿತ್ತು. ಅಲ್ಲಿ ಏನಾಯಿತು ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಶಿ ತರೂರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT