ಐಎನ್ಎಸ್ ತ್ರಿಖಂಡ್ 
ದೇಶ

ಭಾರತೀಯರ ರಕ್ಷಣೆಗೆ ಐಎನ್ಎಸ್ ತ್ರಿಖಂಡ್: ರವೀಶ್ ಕುಮಾರ್

ಇರಾನ್ ನಲ್ಲಿ ಉಂಟಾಗಿರುವ ಪ್ರಕ್ಷಬ್ದ ಪರಿಸ್ಥಿತಿಯ ಹಿನ್ನಲೆಯಲ್ಲಿ ಅಗತ್ಯವೆನಿಸಿದರೆ ಭಾರತೀಯರನ್ನು ಸ್ಥಳಾಂತರಿಸಲು ಐಎನ್ ಎಸ್ ತ್ರಿಖಂಡ್ ಅನ್ನು ಅಲ್ಲಿಗೆ ಕಳುಹಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನವದೆಹಲಿ: ಇರಾನ್ ನಲ್ಲಿ ಉಂಟಾಗಿರುವ ಪ್ರಕ್ಷಬ್ದ ಪರಿಸ್ಥಿತಿಯ ಹಿನ್ನಲೆಯಲ್ಲಿ ಅಗತ್ಯವೆನಿಸಿದರೆ ಭಾರತೀಯರನ್ನು ಸ್ಥಳಾಂತರಿಸಲು ಐಎನ್ ಎಸ್ ತ್ರಿಖಂಡ್ ಅನ್ನು ಅಲ್ಲಿಗೆ ಕಳುಹಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಕಳೆದ ವರ್ಷದ ನವೆಂಬರ್ ನಿಂದ ಭಾರತೀಯ ನೌಕಾ ಪಡೆಯ ಹಡಗು ಐಎನ್ ಎಸ್ ತ್ರಿಖಂಡ್ ಗಲ್ಫ್ ಆಫ್ ಒಮಾನ್ ನಲ್ಲಿದೆ. ಒಂದು ವೇಳೆ ಅಗತ್ಯಬಿದ್ದರೆ ಇರಾನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ತ್ರಿಖಂಡ್ ನೌಕೆಯನ್ನು ಕಳುಹಿಸಲಾಗುವುದು ಎಂದರು. 

ಕಳೆದ ವರ್ಷದ ನವೆಂಬರ್ ನಿಂದ ಭಾರತೀಯ ನೌಕಾ ಪಡೆಯ ಹಡಗು ಐಎನ್ ಎಸ್ ತ್ರಿಖಂಡ್ ಗಲ್ಫ್ ಆಫ್ ಒಮಾನ್ ನಲ್ಲಿದೆ. ಒಂದು ವೇಳೆ ಅಗತ್ಯವಿದ್ದರೆ ಇರಾನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ತ್ರಿಖಂಡ್ ಅನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅಮೆರಿಕ ಇರಾನ್ ನಡುವಿನ ಭೌಗೋಳಿಕ-ರಾಜಕೀಯ ಸಂಘರ್ಷದ ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. 

ಅಮೆರಿಕ ವಾಯುಪಡೆ ದಾಳಿ ನಡೆಸುವ ಮೂಲಕ ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಹತ್ಯೆಗೈದಿರುವ ಹಿನ್ನೆಲೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿದೆ. ಆದರೆ ಉಭಯ ದೇಶಗಳು ಯುದ್ಧಕ್ಕೆ ಮುಂದಾಗದೆ ಮಾತುಕತೆ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!