ದೇಶ

ವಿದ್ಯಾರ್ಥಿಗಳು-ಆಡಳಿತ ಮಂಡಳಿ ಭಿನ್ನಾಭಿಪ್ರಾಯ ಕೊನೆಗಾಣಿಸಲು ಜೆಎನ್ ಯು ಉಪಕುಲಪತಿಗಳಿಗೆ ಎಚ್ಚರಿಕೆ! 

ಜೆಎನ್ ಯು ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಂತಿಮ ಎಚ್ಚರಿಕೆ ವಿಧಿಸಿದೆ. 

ನವದೆಹಲಿ: ಜೆಎನ್ ಯು ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಂತಿಮ ಎಚ್ಚರಿಕೆ ವಿಧಿಸಿದೆ. 

ಇತ್ತೀಚೆಗೆ ಜೆಎನ್ ಯು ಆಡಳಿತಮಂಡಳಿ ಹಾಗೂ ಹೆಚ್ ಆರ್ ಡಿ ಅಧಿಕಾರಿಗಳ ಸಭೆ ನಡೆದಿತ್ತು. ಈ ವೇಳೆ ಅಕ್ಷರಶಹ ಕಠಿಣ ಸಂದೇಶ, ಗಡುವನ್ನು ರವಾನೆ ಮಾಡಿರುವ ಹೆಚ್ ಆರ್ ಡಿ ಸಚಿವಾಲಯ, ಸೇವೆ ಮತ್ತು ಯುಟಿಲಿಟಿ ಶುಲ್ಕಗಳನ್ನು ತೆಗೆದುಹಾಕಿರುವ ಆಡಳಿತ ಮಂಡಳಿಯ ನಿರ್ಧಾರವನ್ನು ಏಕೆ ಸರಿಯಾಗಿ ಪ್ರಚಾರ ಮಾಡಿಲ್ಲ ಇದರಿಂದ ಆಡಳಿತಮಂಡಳಿ ಹಾಗೂ ವಿದ್ಯಾರ್ಥಿಗಳ ನಡುವೆ ಭಿನ್ನಾಭಿಪ್ರಾಯ ತಲೆದೋರುವುದಕ್ಕೆ ಸಾಧ್ಯವಾಗಿದೆ ಎಂದು ಹೇಳಿದೆ. 

ಉಪಕುಲಪತಿ ಜಗದೀಶ್ ಕುಮಾರ್ ಅವರು 2019 ರ ಡಿಸೆಂಬರ್ ನಲ್ಲಿಯೇ ಶುಲ್ಕಗಳನ್ನು ಕೈಬಿಡುವ ನಿರ್ಧಾರ ಕೈಗೊಂಡಿದ್ದರೂ ಅದನ್ನು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಮನದಟ್ಟು ಮಾಡಿಕೊಡಲು ವಿಫಲರಾಗಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 

ವಿದ್ಯಾರ್ಥಿಗಳು ಸೇವೆ ಹಾಗೂ ಯುಟಿಲಿಟಿ ಶುಲ್ಕಗಳನ್ನು ಪಾವತಿ ಮಾಡದೇ ಇರುವ ನಿರ್ಧಾರ ಕೈಗೊಂಡ ನಂತರ ಅದನ್ನು ಏಕೆ ಸರಿಯಾಗಿ ಪ್ರಚಾರ ಮಾಡಲಿಲ್ಲ? ನೀವು ಅದನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ಮನದಟ್ಟು ಮಾಡಬೇಕಿತ್ತು ಎಂದು ಉಪಕುಲಪತಿಗಳಿಗೆ ಹೆಚ್ ಆರ್ ಡಿಯ ಹಿರಿಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ. 

ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿದ್ದ ಹೆಚ್ ಆರ್ ಡಿ, ಸಮಸ್ಯೆ ಬಗೆಹರಿಸಲು ಕಳೆದ ತಿಂಗಳು ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈಗ ಕಠಿಣ ಎಚ್ಚರಿಕೆ ನೀಡಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT