ಜೆಎನ್ಎಸ್ ಯು ಅಧ್ಯಕ್ಷೆ ಐಶೆ ಘೋಷ್ 
ದೇಶ

ಜೆಎನ್ ಯು ಹಿಂಸಾಚಾರ ಪ್ರಕರಣಕ್ಕೆ ಟ್ವಿಸ್ಟ್: ಶಂಕಿತ ದಾಳಿಕೋರರ ಪಟ್ಟಿಯಲ್ಲಿ ಐಶೆ ಘೋಷ್ ಹೆಸರು!

ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಗೆ ದೆಹಲಿ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದು, ಅಂದು ಪ್ರತಿಭಟನೆ ನಡೆಸುತ್ತಿದ್ದ ಜೆಎನ್ಎಸ್ ಯು ಅಧ್ಯಕ್ಷೆ ಐಶೆ ಘೋಷ್ ಅವರನ್ನೂ ದಾಳಿ ನಡೆಸಿದ ದಾಳಿಕೋರರ ಶಂಕಿತ ಪಟ್ಟಿಗೆ ಸೇರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನವದೆಹಲಿ: ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಗೆ ದೆಹಲಿ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದು, ಅಂದು ಪ್ರತಿಭಟನೆ ನಡೆಸುತ್ತಿದ್ದ ಜೆಎನ್ಎಸ್ ಯು ಅಧ್ಯಕ್ಷೆ ಐಶೆ ಘೋಷ್ ಅವರನ್ನೂ ದಾಳಿ ನಡೆಸಿದ ದಾಳಿಕೋರರ ಶಂಕಿತ ಪಟ್ಟಿಗೆ ಸೇರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹೌದು.. ಜೆಎನ್ ಯು ಹಿಂಸಾಚಾರ ಪ್ರಕರಣದಲ್ಲಿ ದಾಳಿ ನಡೆಸಿದ ಶಂಕಿತ ದಾಳಿಕೋರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಪಟ್ಟಿಯಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶೆ ಘೋಷ್ ಅವರ ಹೆಸರೂ ಕೂಡ ಇರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ಇತರೆ 8 ಮಂದಿ ಶಂಕಿತರ ಪಟ್ಟಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಎಂಎಸ್ ರಾಂಧವ ಅವರು, ಈ ವರೆಗೆ ತನಿಖಾಧಿಕಾರಿಗಳು ಕಲೆಹಾಕಿರುವ ಮಾಹಿತಿಗಳ ಮೇರೆಗೆ ಜೆಎನ್ ಯು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಸಿದಂತೆ ಶಂಕಿತ ದಾಳಿಕೋರರನ್ನು ಗುರುತಿಸಲಾಗಿದೆ. ಶಂಕಿತರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದರು.

ಅಂತೆಯೇ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಇತರೆ ಮಾಧ್ಯಮಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದನ್ನು ಇಲಾಖೆ ಗಮನಿಸಿದೆ. ಈ ವರೆಗೂ ಅಧಿಕಾರಿಗಳು ಯಾವುದೇ ಶಂಕಿತರನ್ನು ವಶಕ್ಕೆ ಪಡೆದಿಲ್ಲ. ಮತ್ತು ಯಾರನ್ನೂ ತನಿಖೆಗೊಳಪಡಿಸಿಲ್ಲ. ಆದರೂ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿವೆ. ಇದೇ ಕಾರಣಕ್ಕೆ ಇಂದು ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನಾಧರಿಸಿ ಶಂಕಿತ ದಾಳಿಕೋರರನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಅವರನ್ನು ತನಿಖೆಗೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT