ಸಂಗ್ರಹ ಚಿತ್ರ 
ದೇಶ

ತಮ್ಮ ಅಲ್ಪಸಂಖ್ಯಾತರ ನೋಡಿಕೊಳ್ಳಲು ಸಾಧ್ಯವಾಗದವರು, ಇತರರಿಗೆ ಪಾಠ ಮಾಡುವ ಅಗತ್ಯವಿಲ್ಲ: ಪಾಕ್'ಗೆ ಭಾರತ

ತಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರನ್ನು ನೋಡಿಕೊಳ್ಳಲು ಸಾಧ್ಯವಾಗದವರು, ಇತರರಿಗೆ ಹೇಗೆ ಮಾಡಬೇಕೆಂಬುದನ್ನು ಹೇಳುವ ಅಗತ್ಯವಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದೆ. 

ನವದೆಹಲಿ: ತಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರನ್ನು ನೋಡಿಕೊಳ್ಳಲು ಸಾಧ್ಯವಾಗದವರು, ಇತರರಿಗೆ ಹೇಗೆ ಮಾಡಬೇಕೆಂಬುದನ್ನು ಹೇಳುವ ಅಗತ್ಯವಿಲ್ಲ ಎಂದು ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದೆ. 

ಗುರುದ್ವಾರ ನಾನಕ್ ಸಾಹಿಬ್ ಹಾಗೂ ಸಿಖ್ಕ್ ವ್ಯಕ್ತಿಯ ಹತ್ಯೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಗುಡುಗಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಸಿಖ್ ವ್ಯಕ್ತಿ ಹಾಗೂ ಗುರುದ್ವಾರದ ಮೇಲಿನ ದಾಳಿ ಪಾಕಿಸ್ತಾನಕ್ಕೆ ಹಿಡಿದ ಕನ್ನಡಿಯಾಗಿದ. ಇತರರಿಗೆ ಪಾಠ ಮಾಡುವುದನ್ನು ಹೇಳುತ್ತಿರುವವರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದ್ದಾರೆ. 

ಅಲ್ಲದೆ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧ ಕೂಡ ವಾಗ್ದಾಳಿ ನಡೆಸಿರುವ ಅವರು, ತಮ್ಮ ಕೆಲಸದ ಬಗ್ಗೆ ನಿರ್ಲಕ್ಷ್ಯವಹಿಸಿ ಇತರೆ ದೇಶಗಳ ವಿಚಾರಗಳ ಬಗ್ಗೆ ಮಾತನಾಡುವುದು ನೆರೆ ರಾಷ್ಟ್ರದ ರಾಜಕೀಯ ವ್ಯಕ್ತಿಗಳಿಗೆ ಹವ್ಯಾಸವಾಗಿ ಹೋಗಿದೆ ಎಂದು ತಿಳಿಸಿದ್ದಾರೆ. 

ತಮ್ಮ ದೇಶದ ಆಂತರಿಕ ವಿಚಾರ ಹಾಗೂ ತಮ್ಮ ದೇಶದ ಅಲ್ಪ ಸಂಖ್ಯಾತರ ಬಗ್ಗೆ, ಅವರ ಮೇಲಿನ ದೌರ್ಜನ್ಯದ ಬಗ್ಗೆ ಮೊದಲು ಪಾಕಿಸ್ತಾನ ಗಮನಹರಿಸಬೇಕಿದೆ. ಅವರಿಗೆ ನ್ಯಾಯ ದೊರಕಿಸಿಕೊಡಿಸುವುದರತ್ತ ಗಮನ ಹರಿಸಬೇಕಿದೆ. ತಮ್ಮ ದೇಶದ ಅಲ್ಪಸಂಖ್ಯಾತರು, ಸಿಖ್ಖರನ್ನು ರಕ್ಷಣೆ ಮಾಡಲಾಗದವರು, ಇತರರಿಗೆ ಹೇಗೆ ಮಾಡಬೇಕೆಂಬುದನ್ನು ಹೇಳುವ ಅಗತ್ಯವಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT