ರಂದೀಪ್ ಸಿಂಗ್ ಸುರ್ಜೇವಾಲಾ 
ದೇಶ

ಕಾಶ್ಮೀರ ತೀರ್ಪು ಮೂಲಕ ಇಡೀ ದೇಶ ಸಂವಿಧಾನಕ್ಕೆ ತಲೆ ಬಾಗುತ್ತದೆ ಎಂಬುದನ್ನು ಸುಪ್ರೀಂಕೋರ್ಟ್ ಮೋದಿಗೆ ತಿಳಿಸಿದೆ: ಕಾಂಗ್ರೆಸ್

ಕಾಶ್ಮೀರ ಕುರಿತು ನೀಡಲಾಗಿರುವ ತೀರ್ಪು ಮೂಲಕ ಇಡೀ ದೇಶ ಸಂವಿಧಾನಕ್ಕೆ ತಲೆಬಾಗುತ್ತದೆಯೇ ವಿನಃ ನಿಮಗಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸುಪ್ರೀಂಕೋರ್ಟ್ ನೆನಪಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ. 

ನವದೆಹಲಿ: ಕಾಶ್ಮೀರ ಕುರಿತು ನೀಡಲಾಗಿರುವ ತೀರ್ಪು ಮೂಲಕ ಇಡೀ ದೇಶ ಸಂವಿಧಾನಕ್ಕೆ ತಲೆಬಾಗುತ್ತದೆಯೇ ವಿನಃ ನಿಮಗಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸುಪ್ರೀಂಕೋರ್ಟ್ ನೆನಪಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ. 

ತೀರ್ಪು ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಅಂತರ್ಜಾಲದ ಪ್ರಾಮುಖ್ಯತೆಯನ್ನು ಮೂಲಭೂತ ಹಕ್ಕು ಎಂದು ಹೇಳುವ ಮೂಲಕ ಮೋದಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳಿಗೆ ಸುಪ್ರೀಂಕೋರ್ಟ್ ದೊಡ್ಡ ಹೊಡೆತನ್ನು ನೀಡಿದೆ ಎಂದು ಹೇಳಿದ್ದಾರೆ. 

ಭಿನ್ನಾಭಿಪ್ರಾಯ ಹೊಂದಿರುವವರ ಮೇಲೆ ಸೆಕ್ಷನ್ 144 ಜಾರಿ ಮಾಡಲು ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ತೀರ್ಪು ಮೂಲಕ ನ್ಯಾಯಲಯ ಇಡೀ ದೇಶ ಸಂವಿಧಾನಕ್ಕೇ ವಿನಃ ನಿಮಗೆ ತಲೆ ಬಾಗುವುದಿಲ್ಲ ಎಂಬುನದ್ನು ಮೋದಿಯವರಿಗೆ ಮನವರಿಕೆ ಮಾಡಿದೆ ಎಂದು ತಿಳಿಸಿದ್ದಾರೆ. 

ಸಂವಿಧಾನದ 370ನೇ ವಿಧಿಯನ್ನು ಕಾಶ್ಮೀರದಿಂದ ತೆರವುಗೊಳಿಸಿದ ಬಳಿಕ ಕಾಶ್ಮೀರದ ಎಲ್ಲಾ ಕಡೆಗಳಲ್ಲಿ ಸಂಪೂರ್ಣ ಅಂತರ್ಜಾಲ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು. ತಿಂಗಳುಗಳ ನಂತರ ಪೋಸ್ಟ್ ಪೇಡ್ ಸಿಮ್ ಗಳಿಗೆ ಮಾತ್ರ ದೂರವಾಣಿ ಸಂಪರ್ಕ ಕಲ್ಪಿಸಲಾಗಿತ್ತು. ಅದಾದ ಬಳಿಕ ಕೆಲ ಪ್ರದೇಶಗಳಲ್ಲಿ ಮಾತ್ರ ಅಂತರ್ಜಾಲ ಸೌಲಭ್ಯ ನೀಡಲಾಗಿತ್ತು. ಇದೀಗ ಈ ಬಗ್ಗೆ ಸುಪ್ರೀಂಕೋರ್ಟ್ ಮಹತ್ತರವಾದ ಆದೇಶವನ್ನು ಹೊರಡಿಸಿದ್ದು, ಸಂಪೂರ್ಣ ಅಂತರ್ಜಾಲ ಸೌಲಭ್ಯ ನೀಡುವಂತೆ ಸೂಚಿಸಿದೆ. ಜೊತೆಗೆ ಕಾಶ್ಮೀರ ಭೇಟಿಗೆ ಇರುವ ನಿರ್ಬಂಧಗಳನ್ನು 7 ದಿನಗಳೊಳಗಾಗಿ ತೆರವುಗೊಳಿಸುವಂತೆ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

US-Iran war ಎಫೆಕ್ಟ್: ಪಾಕಿಸ್ತಾನದಲ್ಲಿ ಇಂಧನ ಸಂಕಷ್ಟ; ಶಾಲೆಗಳು 2 ವಾರ ಬಂದ್, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Epic Fury: ಇರಾನ್‌ನಲ್ಲಿ ಸೈನಿಕ ಕಾರ್ಯಾಚರಣೆ ಸದ್ಯದಲ್ಲೇ ಅಂತ್ಯಗೊಳ್ಳಲಿದೆ: ಡೊನಾಲ್ಡ್ ಟ್ರಂಪ್

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

SCROLL FOR NEXT