ರಂದೀಪ್ ಸಿಂಗ್ ಸುರ್ಜೇವಾಲಾ 
ದೇಶ

ಕಾಶ್ಮೀರ ತೀರ್ಪು ಮೂಲಕ ಇಡೀ ದೇಶ ಸಂವಿಧಾನಕ್ಕೆ ತಲೆ ಬಾಗುತ್ತದೆ ಎಂಬುದನ್ನು ಸುಪ್ರೀಂಕೋರ್ಟ್ ಮೋದಿಗೆ ತಿಳಿಸಿದೆ: ಕಾಂಗ್ರೆಸ್

ಕಾಶ್ಮೀರ ಕುರಿತು ನೀಡಲಾಗಿರುವ ತೀರ್ಪು ಮೂಲಕ ಇಡೀ ದೇಶ ಸಂವಿಧಾನಕ್ಕೆ ತಲೆಬಾಗುತ್ತದೆಯೇ ವಿನಃ ನಿಮಗಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸುಪ್ರೀಂಕೋರ್ಟ್ ನೆನಪಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ. 

ನವದೆಹಲಿ: ಕಾಶ್ಮೀರ ಕುರಿತು ನೀಡಲಾಗಿರುವ ತೀರ್ಪು ಮೂಲಕ ಇಡೀ ದೇಶ ಸಂವಿಧಾನಕ್ಕೆ ತಲೆಬಾಗುತ್ತದೆಯೇ ವಿನಃ ನಿಮಗಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸುಪ್ರೀಂಕೋರ್ಟ್ ನೆನಪಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ. 

ತೀರ್ಪು ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಅಂತರ್ಜಾಲದ ಪ್ರಾಮುಖ್ಯತೆಯನ್ನು ಮೂಲಭೂತ ಹಕ್ಕು ಎಂದು ಹೇಳುವ ಮೂಲಕ ಮೋದಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳಿಗೆ ಸುಪ್ರೀಂಕೋರ್ಟ್ ದೊಡ್ಡ ಹೊಡೆತನ್ನು ನೀಡಿದೆ ಎಂದು ಹೇಳಿದ್ದಾರೆ. 

ಭಿನ್ನಾಭಿಪ್ರಾಯ ಹೊಂದಿರುವವರ ಮೇಲೆ ಸೆಕ್ಷನ್ 144 ಜಾರಿ ಮಾಡಲು ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ತೀರ್ಪು ಮೂಲಕ ನ್ಯಾಯಲಯ ಇಡೀ ದೇಶ ಸಂವಿಧಾನಕ್ಕೇ ವಿನಃ ನಿಮಗೆ ತಲೆ ಬಾಗುವುದಿಲ್ಲ ಎಂಬುನದ್ನು ಮೋದಿಯವರಿಗೆ ಮನವರಿಕೆ ಮಾಡಿದೆ ಎಂದು ತಿಳಿಸಿದ್ದಾರೆ. 

ಸಂವಿಧಾನದ 370ನೇ ವಿಧಿಯನ್ನು ಕಾಶ್ಮೀರದಿಂದ ತೆರವುಗೊಳಿಸಿದ ಬಳಿಕ ಕಾಶ್ಮೀರದ ಎಲ್ಲಾ ಕಡೆಗಳಲ್ಲಿ ಸಂಪೂರ್ಣ ಅಂತರ್ಜಾಲ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು. ತಿಂಗಳುಗಳ ನಂತರ ಪೋಸ್ಟ್ ಪೇಡ್ ಸಿಮ್ ಗಳಿಗೆ ಮಾತ್ರ ದೂರವಾಣಿ ಸಂಪರ್ಕ ಕಲ್ಪಿಸಲಾಗಿತ್ತು. ಅದಾದ ಬಳಿಕ ಕೆಲ ಪ್ರದೇಶಗಳಲ್ಲಿ ಮಾತ್ರ ಅಂತರ್ಜಾಲ ಸೌಲಭ್ಯ ನೀಡಲಾಗಿತ್ತು. ಇದೀಗ ಈ ಬಗ್ಗೆ ಸುಪ್ರೀಂಕೋರ್ಟ್ ಮಹತ್ತರವಾದ ಆದೇಶವನ್ನು ಹೊರಡಿಸಿದ್ದು, ಸಂಪೂರ್ಣ ಅಂತರ್ಜಾಲ ಸೌಲಭ್ಯ ನೀಡುವಂತೆ ಸೂಚಿಸಿದೆ. ಜೊತೆಗೆ ಕಾಶ್ಮೀರ ಭೇಟಿಗೆ ಇರುವ ನಿರ್ಬಂಧಗಳನ್ನು 7 ದಿನಗಳೊಳಗಾಗಿ ತೆರವುಗೊಳಿಸುವಂತೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT