ಬಿಜೆಪಿ ಸಂಸದ ನಾರಾಯಣ್ ರಾಣೆ 
ದೇಶ

ಮಹಾರಾಷ್ಟ್ರ: 35 ಶಿವಸೇನಾ ಶಾಸಕರಲ್ಲಿ ಅಸಮಾಧಾನ: ಬಿಜೆಪಿ ಸಂಸದ ನಾರಾಯಣ್ ರಾಣೆ

56 ಶಿವಸೇನಾ ಶಾಸಕರ ಪೈಕಿ 35 ಶಾಸಕರಲ್ಲಿ ಪಕ್ಷದ ನಾಯಕತ್ವದ ವಿರುದ್ಧ  ಅಸಮಾಧಾನವಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಹೇಳಿದ್ದಾರೆ.

ಥಾಣೆ: 56 ಶಿವಸೇನಾ ಶಾಸಕರ ಪೈಕಿ 35 ಶಾಸಕರಲ್ಲಿ ಪಕ್ಷದ ನಾಯಕತ್ವದ ವಿರುದ್ಧ  ಅಸಮಾಧಾನವಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಹೇಳಿದ್ದಾರೆ.

 ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್  ರಾಜ್ಯದಲ್ಲಿ ಸರ್ಕಾರ  ರಚನೆಗೆ  ಐದು ವಾರಗಳಿಗೂ ಹೆಚ್ಚು ದಿನ ತೆಗೆದುಕೊಂಡರೂ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹಾಲಿ ರಾಜ್ಯಸಭಾ ಸದಸ್ಯ ಆಗಿರುವ ನಾರಾಯಣ್  ರಾಣೆ ಟೀಕಿಸಿದ್ದಾರೆ.

ಬಿಜೆಪಿ 105 ಶಾಸಕರನ್ನು ಹೊಂದಿದೆ. ಶಿವಸೇನೆ ಕೇವಲ 56 ಶಾಸಕರನ್ನು ಹೊಂದಿದೆ. ಅದರಲ್ಲಿಯೂ 35 ಮಂದಿಯಲ್ಲಿ ಅಸಮಾಧಾನವಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ರೈತರ ಸಾಲಮನ್ನಾ ಘೋಷಣೆ ಕೇವಲ ಸುಳ್ಳು. ಅದು ಯಾವಾಗ ಅನುಷ್ಠಾನವಾಗಲಿದೆ ಎಂಬುದರ ಬಗ್ಗೆ ಯಾವುದೇ ಸಮಯ ನಿಗದಿಪಡಿಸಿಲ್ಲ, ಇಂತಹ ಸರ್ಕಾರದಿಂದ ಏನನ್ನು ನಿರೀಕ್ಷಿಸಲು ಸಾಧ್ಯ, ಸರ್ಕಾರದ ಬಗ್ಗೆ ಅವರಿಗೆ ಏನು ಗೊತ್ತೇ ಇಲ್ಲ ಎಂದರು.

 ಸರ್ಕಾರ ರಚನೆಗೆ ಐದು ವಾರಗಳಿಗೂ ಅಧಿಕ ದಿನ ತೆಗೆದುಕೊಂಡಾಗಲೇ ಹೇಗೆ ಆಡಳಿತ ನಿರ್ವಹಣೆ ಮಾಡಲಿದ್ದಾರೆ ಎಂಬುದನ್ನು ಪ್ರತಿಯೊಬ್ಬರು ಊಹಿಸಿದ್ದಾರೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT