ಬಿಜೆಪಿ ಸಂಸದ ನಾರಾಯಣ್ ರಾಣೆ 
ದೇಶ

ಮಹಾರಾಷ್ಟ್ರ: 35 ಶಿವಸೇನಾ ಶಾಸಕರಲ್ಲಿ ಅಸಮಾಧಾನ: ಬಿಜೆಪಿ ಸಂಸದ ನಾರಾಯಣ್ ರಾಣೆ

56 ಶಿವಸೇನಾ ಶಾಸಕರ ಪೈಕಿ 35 ಶಾಸಕರಲ್ಲಿ ಪಕ್ಷದ ನಾಯಕತ್ವದ ವಿರುದ್ಧ  ಅಸಮಾಧಾನವಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಹೇಳಿದ್ದಾರೆ.

ಥಾಣೆ: 56 ಶಿವಸೇನಾ ಶಾಸಕರ ಪೈಕಿ 35 ಶಾಸಕರಲ್ಲಿ ಪಕ್ಷದ ನಾಯಕತ್ವದ ವಿರುದ್ಧ  ಅಸಮಾಧಾನವಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಹೇಳಿದ್ದಾರೆ.

 ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್  ರಾಜ್ಯದಲ್ಲಿ ಸರ್ಕಾರ  ರಚನೆಗೆ  ಐದು ವಾರಗಳಿಗೂ ಹೆಚ್ಚು ದಿನ ತೆಗೆದುಕೊಂಡರೂ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹಾಲಿ ರಾಜ್ಯಸಭಾ ಸದಸ್ಯ ಆಗಿರುವ ನಾರಾಯಣ್  ರಾಣೆ ಟೀಕಿಸಿದ್ದಾರೆ.

ಬಿಜೆಪಿ 105 ಶಾಸಕರನ್ನು ಹೊಂದಿದೆ. ಶಿವಸೇನೆ ಕೇವಲ 56 ಶಾಸಕರನ್ನು ಹೊಂದಿದೆ. ಅದರಲ್ಲಿಯೂ 35 ಮಂದಿಯಲ್ಲಿ ಅಸಮಾಧಾನವಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ರೈತರ ಸಾಲಮನ್ನಾ ಘೋಷಣೆ ಕೇವಲ ಸುಳ್ಳು. ಅದು ಯಾವಾಗ ಅನುಷ್ಠಾನವಾಗಲಿದೆ ಎಂಬುದರ ಬಗ್ಗೆ ಯಾವುದೇ ಸಮಯ ನಿಗದಿಪಡಿಸಿಲ್ಲ, ಇಂತಹ ಸರ್ಕಾರದಿಂದ ಏನನ್ನು ನಿರೀಕ್ಷಿಸಲು ಸಾಧ್ಯ, ಸರ್ಕಾರದ ಬಗ್ಗೆ ಅವರಿಗೆ ಏನು ಗೊತ್ತೇ ಇಲ್ಲ ಎಂದರು.

 ಸರ್ಕಾರ ರಚನೆಗೆ ಐದು ವಾರಗಳಿಗೂ ಅಧಿಕ ದಿನ ತೆಗೆದುಕೊಂಡಾಗಲೇ ಹೇಗೆ ಆಡಳಿತ ನಿರ್ವಹಣೆ ಮಾಡಲಿದ್ದಾರೆ ಎಂಬುದನ್ನು ಪ್ರತಿಯೊಬ್ಬರು ಊಹಿಸಿದ್ದಾರೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!