ವಿದ್ಯಾರ್ಥಿಗಳ ಪ್ರತಿಭಟನೆ 
ದೇಶ

ಜೆಎನ್ ಯು ಹಿಂಸಾಚಾರ: 9 ವಿದ್ಯಾರ್ಥಿಗಳಿಗೆ ನೊಟೀಸ್ ಜಾರಿ ಮಾಡಿದ ದೆಹಲಿ ಪೊಲೀಸ್ ಎಸ್ಐಟಿ, ನಾಳೆ ವಿಚಾರಣೆ  

ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ 5ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಇಲಾಖೆಯ ವಿಶೇಷ ತನಿಖಾ ತಂಡ 9 ವಿದ್ಯಾರ್ಥಿಗಳಿಗೆ ನೊಟೀಸ್ ಜಾರಿ ಮಾಡಿದೆ. ಶಂಕಿತರನ್ನು ನಾಳೆ ವಿಚಾರಣೆಗೆ ದೆಹಲಿ ಪೊಲೀಸರು ಕರೆದಿದ್ದಾರೆ.

ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ 5ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಇಲಾಖೆಯ ವಿಶೇಷ ತನಿಖಾ ತಂಡ 9 ವಿದ್ಯಾರ್ಥಿಗಳಿಗೆ ನೊಟೀಸ್ ಜಾರಿ ಮಾಡಿದೆ. ಶಂಕಿತರನ್ನು ನಾಳೆ ವಿಚಾರಣೆಗೆ ದೆಹಲಿ ಪೊಲೀಸರು ಕರೆದಿದ್ದಾರೆ.


ನೊಟೀಸ್ ಪಡೆದಿರುವ ವಿದ್ಯಾರ್ಥಿನಿಯರು ವಿಚಾರಣೆಗೆ ಯಾವ ದಿನಾಂಕ ಮತ್ತು ಸಮಯದಂದು ಬರಲಾಗುತ್ತದೆ ಎಂದು ತಿಳಿಸಬೇಕೆಂದು ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿನಿಯರಿಗೆ ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸುತ್ತಾರೆ. ಇತರರಿಗೆ ದೆಹಲಿಯ ಕಮಲಾ ನಗರದಲ್ಲಿರುವ ಅಪರಾಧ ವಿಭಾಗದ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.


ಹಿಂಸಾಚಾರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು 9 ಶಂಕಿತರ ಹೆಸರನ್ನು ಬಿಡುಗಡೆ ಮಾಡಿದ್ದಾರೆ. ಅವರಲ್ಲಿ 7 ಮಂದಿ ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಎಡಪಂಥೀಯರಾಗಿದ್ದು ಇಬ್ಬರು ಎಬಿವಿಪಿಯವರಾಗಿದ್ದಾರೆ. ಇವರನ್ನು ಸಿಸಿಟಿವಿ ದೃಶ್ಯಾವಳಿ ಮೂಲಕ ಗುರುತಿಸಿ ನೊಟೀಸ್ ಜಾರಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT