ಕಟ್ಟಡ ನೆಲಸಮ ಕಾರ್ಯಾಚರಣೆ 
ದೇಶ

ಮರಾಡು ಅಕ್ರಮ ಕಟ್ಟಡ ಧ್ವಂಸ ಕಾರ್ಯಾಚರಣೆ ಪೂರ್ಣ, ಅಂತಿಮ ಕಟ್ಟಡ ಕೂಡ ನೆಲಸಮ

ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.

ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೊಚ್ಚಿಯ ಮರಾಡು ಪ್ರದೇಶ ಬಳಿಯಿದ್ದ 4 ಲಕ್ಸುರಿ​ ವಸತಿ ಕಟ್ಟಡವನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ ನಾಲ್ಕು ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ಶನಿವಾರ ಎರಡು ಕಟ್ಟಡಗಳನ್ನು ಧ್ವಂಸಗೊಳಿಸಿ, ತೆರುವುಗೊಳಿಸಿದ್ದ ಕೇರಳ ಸರ್ಕಾರ, ಇಂದು ಮತ್ತೆರಡು ಕಟ್ಟಡಗಳನ್ನು ಹೊಡೆದುರುಳಿಸಿದೆ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಎಚ್​2ಒ ಹೋಲಿ ಫೈತ್​​ ಅಪಾರ್ಟ್​ಮೆಂಟ್​ ಅನ್ನು ಉರುಳಿಸಿದ್ದ ಕೊಚ್ಚಿ ಜಿಲ್ಲಾಡಳಿತ ಇದೀಗ ಮತ್ತೊಂದು ಕಟ್ಟಡವನ್ನೂ ಕೂಡ ನೆಲಸಮ ಮಾಡಿದೆ. ನಿಯಂತ್ರಿತ ಸ್ಫೋಟಕಗಳನ್ನು ಬಳಸಿಕೊಂಡು ಗೋಲ್ಡನ್ ಕಯಲೋರಮ್ ಅಪಾರ್ಟ್ ಮೆಂಟ್ ಅನ್ನು ನೆಲಸಮ ಮಾಡಿತು. 

ಆ ಮೂಲಕ ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲ ನಾಲ್ಕೂ ಅಕ್ರಮ ಕಟ್ಟಡಗಳನ್ನು ಕೇರಳ ಸರ್ಕಾರ ನೆಲಸಮ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕಟ್ಟಡ ತೆರವಿಗೆ ಸುಪ್ರೀಂಕೊರ್ಟ್​ ಆದೇಶ ನೀಡಿತ್ತು. ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಮಾರಾಡುವಿನಲ್ಲಿರುವ ಕಟ್ಟಡಗಳನ್ನು ನೆಲಕ್ಕುರುಳಿಸಲು ಕೇರಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಕ್ಕಾಗಿ ನ್ಯಾಯಾಲಯ 138 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದಲ್ಲದೆ, ಮನೆ ಕಳೆದುಕೊಂಡವರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT