ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್ 
ದೇಶ

ಒಮಾನ್‌ನ ಸುಲ್ತಾನ್ ಕಬೂಸ್ ನಿಧನ: ಪ್ರಧಾನಿ ಸಂತಾಪ, ಭಾರತದಲ್ಲಿ ಒಂದು ದಿನ ಶೋಕಾಚರಣೆ

ಶನಿವಾರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದ ಒಮಾನ್‌ನ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್  ಅವರ ಗೌರವ ಸೂಚಕವಾಗಿ ಸೋಮವಾರ (ಜ. 13) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು.

ನವದೆಹಲಿ: ಶನಿವಾರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದ ಒಮಾನ್‌ನ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್  ಅವರ ಗೌರವ ಸೂಚಕವಾಗಿ ಸೋಮವಾರ (ಜ. 13) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು.

ಆ ದಿನ ರಾಷ್ಟ್ರಧ್ವಜವನ್ನು ಅರ್ಧದಷ್ಟು ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮಗಳು ನಡೆಯುವುದಿಲ್ಲವೆಂದು ಗೃಹ ಸಚಿವಾಲಯ (ಎಂಎಚ್‌ಎ) ಹೊರಡಿಸಿದ ಆದೇಶದಲ್ಲಿ ಹೇಳಿದೆ.

ಸುಲ್ತಾನ್ ಕಬೂಸ್ ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಆಡಳಿತಗಾರರಲ್ಲಿ ಒಬ್ಬರು.ಬಹುದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಶನಿವಾರ ನಿಧನರಾದರು.1970 ರಿಂದ ಓಮನ್ ಆಡಳಿತಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಸುಲ್ತಾನ್ ಕಬೂಸ್  ತಮ್ಮ ತಂದೆಯನ್ನು ರಕ್ತರಹಿತ ದಂಗೆಯಿಂದ ಉಚ್ಚಾಟಿಸಿ ಅಧಿಕಾರಕ್ಕೆ ಬಂದಿದ್ದರು.

ಪ್ರಧಾನಿ ನರೇಂದ್ರ ಮೋದಿ ಒಮಾನ್‌ನ ಸುಲ್ತಾನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.  ಅವರನ್ನು 'ಭಾರತ ಮತ್ತು ಜಗತ್ತಿನ ಶಾಂತಿಯ ದಾರಿದೀಪ' ಎಂದು ಸ್ಮರಿಸಿದ್ದಾರೆ. ಒಮಾನ್ ಅನ್ನು ಆಧುನಿಕ ಮತ್ತು ಸಮೃದ್ಧ ರಾಷ್ಟ್ರವಾಗಿ ಪರಿವರ್ತಿಸಿದ ಸುಲ್ತಾನ್ ಕಬೂಸ್ ಒಬ್ಬ 'ದೂರದೃಷ್ಟಿಯ ನಾಯಕ ಮತ್ತು ರಾಜಕಾರಣಿ' ಎಂದು ಪ್ರಧಾನಿ ಹೇಳಿದ್ದಾರೆ.

ಸುಲ್ತಾನ್ ಕಬೂಸ್ ಅವರ ನಿಧನದ ದೃಷ್ಟಿಯಿಂದ ಒಮಾನ್‌ನಲ್ಲಿ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT