ಕಟ್ಟಡ ನೆಲಸಮ ಕಾರ್ಯಾಚರಣೆ 
ದೇಶ

ಮರಾಡು ಅಕ್ರಮ ಕಟ್ಟಡಗಳ ಧ್ವಂಸ ಕಾರ್ಯ ಮುಂದುವರಿಕೆ, ಮತ್ತೊಂದು ಕಟ್ಟಡ ನೆಲಸಮ

ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಗಗನಚುಂಬಿ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಮುಂದುವರೆದಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಗಗನಚುಂಬಿ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಮುಂದುವರೆದಿದ್ದು, ಇಂದೂ ಕೂಡ ಮತ್ತೊಂದು ಫ್ಲಾಟ್ ಅನ್ನು ಧ್ವಂಸಗೊಳಿಸಲಾಗಿದೆ.

ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೊಚ್ಚಿಯ ಮರಾಡು ಪ್ರದೇಶ ಬಳಿಯಿದ್ದ 4 ಲಕ್ಸುರಿ​ ವಸತಿ ಕಟ್ಟಡವನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ ನಾಲ್ಕು ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ಶನಿವಾರ  ಕಟ್ಟಡಗಳನ್ನು ಧ್ವಂಸಗೊಳಿಸಿ, ತೆರುವುಗೊಳಿಸಿದ್ದ ಕೇರಳ ಸರ್ಕಾರ, ಇಂದು ಮತ್ತೊಂದು ಕಟ್ಟಡಗಳನ್ನು ಹೊಡೆದುರುಳಿಸಿದೆ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕಟ್ಟಡ ಉರುಳಿಸುವ ಕೆಲಸವನ್ನು ಕೈಗೆತ್ತಿಕೊಂಡ ಕೇರಳ ಸರ್ಕಾರ, ನಿಯಂತ್ರಿತ ಸ್ಫೋಟಕಗಳನ್ನು ಬಳಸಿಕೊಂಡು ಬಹು ಎತ್ತರದ ಎಚ್​2ಒ ಹೋಲಿ ಫೈತ್​​ ಅಪಾರ್ಟ್​ಮೆಂಟ್​ ಅನ್ನು ನೆಲಸಮ ಮಾಡಿತು. 

ಬಳಿಕ ಕಟ್ಟಡ ಅವಶೇಷಗಳನ್ನು ತೆರವುಗೊಳಿಸಲಾಗಿತ್ತು. ಇಂದು ಬೆಳಗ್ಗೆ ಅದೇ ಸಮಯದಲ್ಲಿ ಮತ್ತೆರಡು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಸ್ಫೋಟಕಗಳನ್ನಿಟ್ಟು ಜೈನ್​ ಕೊರಲ್​ ಕೋವ್​ ಕಾಂಪ್ಲೆಕ್ಸ್​ ಅನ್ನು ಇಂದು ಧ್ವಂಸ ಮಾಡಲಾಗಿದ್ದು, ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ವಿಶೇಷವೆಂದರೆ ವಸತಿ ಕಟ್ಟಡಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ನಡೆದ ಅತ್ಯಂತ ದೊಡ್ಡ ಕಟ್ಟಡ ನೆಲಸಮ ಕಾರ್ಯಾಚರಣೆ ಇದಾಗಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕಟ್ಟಡ ತೆರವಿಗೆ ಸುಪ್ರೀಂಕೊರ್ಟ್​ ಆದೇಶ ನೀಡಿತ್ತು. ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಮಾರಾಡುವಿನಲ್ಲಿರುವ ಕಟ್ಟಡಗಳನ್ನು ನೆಲಕ್ಕುರುಳಿಸಲು ಕೇರಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಕ್ಕಾಗಿ ನ್ಯಾಯಾಲಯ 138 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದಲ್ಲದೆ, ಮನೆ ಕಳೆದುಕೊಂಡವರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT