ಉತ್ತರಾಯಣ: ಗಾಳಿಪಟ ಹಾರಿಸಲು ಅಮಿತ್ ಶಾ ಸಜ್ಜು 
ದೇಶ

ಉತ್ತರಾಯಣ: ಗಾಳಿಪಟ ಹಾರಿಸಲು ಅಮಿತ್ ಶಾ ಸಜ್ಜು

ಉತ್ತರಾಯಣ ಪುಣ್ಯಕಾಲ ಆರಂಭದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಂಧು ಬಾಂಧವರು, ಗೆಳೆಯರ ಜತೆ ಕಾಲ ಕಳೆಯಲು ತವರು ರಾಜ್ಯ ಗುಜರಾತ್ ಗೆ ಆಗಮಿಸಿದ್ದಾರೆ.

ಅಹಮದಾಬಾದ್: ಉತ್ತರಾಯಣ ಪುಣ್ಯಕಾಲ ಆರಂಭದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಂಧು ಬಾಂಧವರು, ಗೆಳೆಯರ ಜತೆ ಕಾಲ ಕಳೆಯಲು ತವರು ರಾಜ್ಯ ಗುಜರಾತ್ ಗೆ ಆಗಮಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಅಮಿತ್ ಶಾ ಗಾಳಿಪಟ ಹಾರಿಸಲಿದ್ದಾರೆ. 

ತಮ್ಮ ಲೋಕಸಭಾ ಕ್ಷೇತ್ರದ ಗಾಂಧಿನಗರದ ವ್ಯಾಪ್ತಿಗೆ ಬರುವ ವೆಜಲ್ ಪುರ ವಿಧಾನಸಭಾ ವಿಭಾಗದ ಆನಂದಪುರ ಪ್ರದೇಶದ ಕಟ್ಟಡದ ಮೇಲ್ಛಾವಣಿಯಲ್ಲಿ ನಿಂತು ಅಮಿತ್ ಶಾ ಗಾಳಿಪಟವನ್ನು ಹಾರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶಾ ಅವರು ಜನವರಿ 15 ರಂದು ನಡೆಯಲಿರುವ ಬಿಜೆಪಿ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ  ರಾಜಧಾನಿಯಲ್ಲಿನ ಮಹಾತ್ಮ ಮಂದಿರದಲ್ಲಿ ಕೌಶಲ್ಯ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT