ಉತ್ತರಾಯಣ: ಗಾಳಿಪಟ ಹಾರಿಸಲು ಅಮಿತ್ ಶಾ ಸಜ್ಜು 
ದೇಶ

ಉತ್ತರಾಯಣ: ಗಾಳಿಪಟ ಹಾರಿಸಲು ಅಮಿತ್ ಶಾ ಸಜ್ಜು

ಉತ್ತರಾಯಣ ಪುಣ್ಯಕಾಲ ಆರಂಭದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಂಧು ಬಾಂಧವರು, ಗೆಳೆಯರ ಜತೆ ಕಾಲ ಕಳೆಯಲು ತವರು ರಾಜ್ಯ ಗುಜರಾತ್ ಗೆ ಆಗಮಿಸಿದ್ದಾರೆ.

ಅಹಮದಾಬಾದ್: ಉತ್ತರಾಯಣ ಪುಣ್ಯಕಾಲ ಆರಂಭದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಂಧು ಬಾಂಧವರು, ಗೆಳೆಯರ ಜತೆ ಕಾಲ ಕಳೆಯಲು ತವರು ರಾಜ್ಯ ಗುಜರಾತ್ ಗೆ ಆಗಮಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಅಮಿತ್ ಶಾ ಗಾಳಿಪಟ ಹಾರಿಸಲಿದ್ದಾರೆ. 

ತಮ್ಮ ಲೋಕಸಭಾ ಕ್ಷೇತ್ರದ ಗಾಂಧಿನಗರದ ವ್ಯಾಪ್ತಿಗೆ ಬರುವ ವೆಜಲ್ ಪುರ ವಿಧಾನಸಭಾ ವಿಭಾಗದ ಆನಂದಪುರ ಪ್ರದೇಶದ ಕಟ್ಟಡದ ಮೇಲ್ಛಾವಣಿಯಲ್ಲಿ ನಿಂತು ಅಮಿತ್ ಶಾ ಗಾಳಿಪಟವನ್ನು ಹಾರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶಾ ಅವರು ಜನವರಿ 15 ರಂದು ನಡೆಯಲಿರುವ ಬಿಜೆಪಿ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ  ರಾಜಧಾನಿಯಲ್ಲಿನ ಮಹಾತ್ಮ ಮಂದಿರದಲ್ಲಿ ಕೌಶಲ್ಯ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT