ಜೆಎನ್'ಯು ಹಿಂಸಾಚಾರ 
ದೇಶ

ಜೆಎನ್'ಯು ಹಿಂಸಾಚಾರ: ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್'ಗಳ ವಶಕ್ಕೆ 'ಹೈ'  ಸೂಚನೆ

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್'ಯು) ದಾಳಿಗೆ ಸಂಚು ರೂಪಿಸಿದ್ದ ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್ ಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್'ಯು) ದಾಳಿಗೆ ಸಂಚು ರೂಪಿಸಿದ್ದ ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್ ಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 5 ರಂದು ನಡೆದ ಹಿಂಸಾಚಾರಕ್ಕೆ ಎರಡು ವಾಟ್ಸ್ ಆ್ಯಪ್ ಗುಂಪುಗಳ ಸದಸ್ಯರು ಸಂಯೋಜಿಸಲಾಗಿದ್ದು, ಗುಂಪಿನ ಸದಸ್ಯರ ಫೋನ್ ಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ಪೊಲೀಸರಿಗೆ ನ್ಯಾಯಾಧೀಶ ಬ್ರಿಜೇಶ್ ಸೇಥಿಯವರು ಸೂಚಿಸಿದ್ದಾರೆ. 

ವಾಟ್ಸ್ ಆ್ಯಪ್ ತಾನು ಸಂದೇಶಗಳನ್ನು ಸರ್ವರ್ ಗಳಲ್ಲಿ ಇಟ್ಟುಕೊಂಡಿರುವುದಿಲ್ಲ. ಆದರೆ, ಬಳಕೆದಾರರ ಫೋನ್ ಗಳಿಂದ ಸಂದೇಶಗಳನ್ನು ಪುನಃ ಪಡೆದುಕೊಳ್ಳಬಹುದು ಎಂದು ಹೇಳಿದ ಬಳಿಕ ನ್ಯಾಯಾಲಯ ಈ ಆದೇಶವನ್ನು ನೀಡಿದೆ.

ಅಲ್ಲದೆ, ಪೊಲೀಸರು ಕೇಳಿರುವ ಹಿಂಸಾಚಾರ ಸಿಸಿಟಿವಿ ದೃಶ್ಯಾವಳಿಗಳನ್ನು ಶೀಘ್ರಗತಿಯಲ್ಲಿ ನೀಡುವಂತೆ ಜೆಎನ್'ಯು ಆಡಳಿತ ಮಂಡಳಿಗ ತಿಳಿಸಿದೆ. 

ಹಿಂಸಾಚಾರ ಸಂಬಂಧ ಜೆಎನ್'ಯು ಪ್ರಾಧ್ಯಾಪಕರಾದ ಅಮೀತ್ ಪರಮೇಶ್ವರನ್, ಅತುಲ್ ಸೂದ್, ಶುಕ್ಲಾ ವಿನಾಯಕ್ ಸಾವಂತ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 

ಅರ್ಜಿಯಲ್ಲಿ ಸಿಸಿಟಿವಿ ದೃಶ್ಯಾವಳಿಗಳು, ವಾಟ್ಸ್'ಆ್ಯಪ್ ಸಂವಾದಗಳು ಮತ್ತು ಜನವರಿ 5ರ ಗಲಭೆಗೆ ಸಂಬಂಧಿಸಿದ ಇತರೆ ಸಾಕ್ಷ್ಯಾಧಾರಗಳನ್ನು ಸಂರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT