ಜೆಎನ್'ಯು ಹಿಂಸಾಚಾರ 
ದೇಶ

ಜೆಎನ್'ಯು ಹಿಂಸಾಚಾರ: ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್'ಗಳ ವಶಕ್ಕೆ 'ಹೈ'  ಸೂಚನೆ

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್'ಯು) ದಾಳಿಗೆ ಸಂಚು ರೂಪಿಸಿದ್ದ ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್ ಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್'ಯು) ದಾಳಿಗೆ ಸಂಚು ರೂಪಿಸಿದ್ದ ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್ ಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 5 ರಂದು ನಡೆದ ಹಿಂಸಾಚಾರಕ್ಕೆ ಎರಡು ವಾಟ್ಸ್ ಆ್ಯಪ್ ಗುಂಪುಗಳ ಸದಸ್ಯರು ಸಂಯೋಜಿಸಲಾಗಿದ್ದು, ಗುಂಪಿನ ಸದಸ್ಯರ ಫೋನ್ ಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ಪೊಲೀಸರಿಗೆ ನ್ಯಾಯಾಧೀಶ ಬ್ರಿಜೇಶ್ ಸೇಥಿಯವರು ಸೂಚಿಸಿದ್ದಾರೆ. 

ವಾಟ್ಸ್ ಆ್ಯಪ್ ತಾನು ಸಂದೇಶಗಳನ್ನು ಸರ್ವರ್ ಗಳಲ್ಲಿ ಇಟ್ಟುಕೊಂಡಿರುವುದಿಲ್ಲ. ಆದರೆ, ಬಳಕೆದಾರರ ಫೋನ್ ಗಳಿಂದ ಸಂದೇಶಗಳನ್ನು ಪುನಃ ಪಡೆದುಕೊಳ್ಳಬಹುದು ಎಂದು ಹೇಳಿದ ಬಳಿಕ ನ್ಯಾಯಾಲಯ ಈ ಆದೇಶವನ್ನು ನೀಡಿದೆ.

ಅಲ್ಲದೆ, ಪೊಲೀಸರು ಕೇಳಿರುವ ಹಿಂಸಾಚಾರ ಸಿಸಿಟಿವಿ ದೃಶ್ಯಾವಳಿಗಳನ್ನು ಶೀಘ್ರಗತಿಯಲ್ಲಿ ನೀಡುವಂತೆ ಜೆಎನ್'ಯು ಆಡಳಿತ ಮಂಡಳಿಗ ತಿಳಿಸಿದೆ. 

ಹಿಂಸಾಚಾರ ಸಂಬಂಧ ಜೆಎನ್'ಯು ಪ್ರಾಧ್ಯಾಪಕರಾದ ಅಮೀತ್ ಪರಮೇಶ್ವರನ್, ಅತುಲ್ ಸೂದ್, ಶುಕ್ಲಾ ವಿನಾಯಕ್ ಸಾವಂತ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 

ಅರ್ಜಿಯಲ್ಲಿ ಸಿಸಿಟಿವಿ ದೃಶ್ಯಾವಳಿಗಳು, ವಾಟ್ಸ್'ಆ್ಯಪ್ ಸಂವಾದಗಳು ಮತ್ತು ಜನವರಿ 5ರ ಗಲಭೆಗೆ ಸಂಬಂಧಿಸಿದ ಇತರೆ ಸಾಕ್ಷ್ಯಾಧಾರಗಳನ್ನು ಸಂರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT