ಭಾರತೀಯ ಯೋಧರು 
ದೇಶ

ಉದ್ದಂಪುರ ಸೇನಾ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ಕರ್ನಾಟಕದ ಯೋಧ ಸೇರಿ ಇಬ್ಬರು ಹುತಾತ್ಮ!

ಉದ್ಧಂಪುರದ ಸುಯಿ ಗ್ರಾಮದಲ್ಲಿನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ನಡೆದಿದ್ದು ಪರಿಣಾಮ ಕರ್ನಾಟಕ ಯೋಧ ಸೇರಿ ಇಬ್ಬರು ಹುತಾತ್ಮರಾಗಿದ್ದಾರೆ.

ಉದ್ದಂಪುರ(ಜಮ್ಮ ಮತ್ತು ಕಾಶ್ಮೀರ): ಉದ್ಧಂಪುರದ ಸುಯಿ ಗ್ರಾಮದಲ್ಲಿನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಕ್ಯಾಂಪ್ ನಲ್ಲಿ ಗುಂಡಿನ ದಾಳಿ ನಡೆದಿದ್ದು ಪರಿಣಾಮ ಕರ್ನಾಟಕ ಯೋಧ ಸೇರಿ ಇಬ್ಬರು ಹುತಾತ್ಮರಾಗಿದ್ದಾರೆ. 

ಯಾವುದೋ ವಿಷಯ ಸಂಬಂಧ ಸಿಡಿಮಿಡಿಗೊಂಡ ಯೋಧನೋರ್ವ ಸಹ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಕರ್ನಾಟಕದ ಯೋಧ ಬಿಎನ್ ಮೂರ್ತಿ ಮತ್ತು ಮೊಹಮ್ಮದ್ ತಸ್ಲೀಂ ಎಂಬ ಯೋಧರು ಹುತಾತ್ಮರಾಗಿದ್ದಾರೆ. 

ಗುಂಡಿನ ದಾಳಿಯಲ್ಲಿ ಮತ್ತೋರ್ವ ಯೋಧ ಸಂಜಯ್ ತಾಲಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ಕುರಿತಂತೆ ಮಾಹಿತಿ ಸಿಕ್ಕ ತಕ್ಷಣ ಹಿರಿಯ ಅಧಿಕಾರಿಗಳು ಕ್ಯಾಂಪ್ ಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸ್ಪಷ್ಟ ಉದ್ದೇಶದೊಂದಿಗೆ ಆರಂಭಗೊಂಡ Operation Sindoor ಗುರಿ ತಲುಪಿದ ಮೇಲೆ ಬೇಗನೆ ನಿಲ್ಲಿಸಲಾಯಿತು: IAF ಮುಖ್ಯಸ್ಥ

ಪ್ರಧಾನಿ ಮೋದಿ 'ಆಧುನಿಕ ರಾವಣ: ಶೀಘ್ರವೇ ಅವರ ಚಿನ್ನದ ಅರಮನೆ ಸುಟ್ಟು ಬೂದಿಯಾಗಲಿದೆ; ಉದಿತ್ ರಾಜ್

ಆಡಳಿತ ವೈಫಲ್ಯದ ಲಾಭ ಪಡೆಯಲೂ ವಿಫಲವಾಗಿರುವ ಪ್ರತಿಪಕ್ಷ ಬಿಜೆಪಿ (ನೇರ ನೋಟ)

ಲಡಾಖ್: ಪತಿಯ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಾಂಗ್ಚುಕ್ ಪತ್ನಿ ಗೀತಾಂಜಲಿ

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆ ಮಾತು!

SCROLL FOR NEXT