ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ನಮನ 
ದೇಶ

72ನೇ ಸೇನಾ ದಿನಾಚರಣೆ: ಹುತಾತ್ಮ ಯೋಧರಿಗೆ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರಿಂದ ಗೌರವ ನಮನ

ದೇಶಾದ್ಯಂತ ಬುಧವಾರ 72ನೇ ಸೇನಾ ದಿನವನ್ನು ಆಚರಿಸಲಾಗುತ್ತಿದೆ. ಜನರಲ್.ಕೆ.ಎಂ.ಕಾರ್ಯಪ್ಪ ಅವರು 1949ರಲ್ಲಿ ಸೇನಾ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡು ಸ್ವಾತಂತ್ರ್ಯೋತ್ತರದಲ್ಲಿ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡ ದಿನದ ಸ್ಮರಣೆಗಾಗಿ ಭಾರತೀಯ ಸೇನಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ನವದೆಹಲಿ: ದೇಶಾದ್ಯಂತ ಬುಧವಾರ 72ನೇ ಸೇನಾ ದಿನವನ್ನು ಆಚರಿಸಲಾಗುತ್ತಿದೆ. ಜನರಲ್.ಕೆ.ಎಂ.ಕಾರ್ಯಪ್ಪ ಅವರು ಕೊನೆಯ ಬ್ರಿಟಿಷ್ ಕಮಾಂಡರ್ ಇನ್ ಚೀಫ್ ಜ.ಸರ್ ಎಫ್ ಆರ್ ಆರ್ ಬುಚರ್ ಅವರಿಂದ 1949ರಲ್ಲಿ ಸೇನಾ ಕಮಾಂಡರ್ ಹುದ್ದೆಯನ್ನು ವಹಿಸಿಕೊಂಡು ಸ್ವಾತಂತ್ರ್ಯೋತ್ತರದಲ್ಲಿ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡ ದಿನದ ಸ್ಮರಣೆಗಾಗಿ ಭಾರತೀಯ ಸೇನಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.


ಈ ಸಂದರ್ಭದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಸೇನೆಯ ಎಲ್ಲಾ ದರ್ಜೆಯ ಅಧಿಕಾರಿಗಳನ್ನು,ಅವರ ಕುಟುಂಬವರ್ಗದವರಿಗೆ, ನಿವೃತ್ತ ಸೇನಾ ಯೋಧರು, ನಿವೃತ್ತ ಅಧಿಕಾರಿಗಳಿಗೆ 72ನೇ ಸೇನಾ ದಿನದ ಅಂಗವಾಗಿ ಅಭಿನಂದನೆ ಸಲ್ಲಿಸಿದರು.


ಭಾರತೀಯ ಸೇನೆ ದೇಶದ ಭದ್ರತಾ ಸವಾಲುಗಳಿಗೆ ದಿಟ್ಟವಾಗಿ ಸ್ಪಂದಿಸುತ್ತಾ ಬಂದಿದೆ, ಹೆಚ್ಚು ಸಂಕೀರ್ಣ ಪರಿಸ್ಥಿತಿಯಲ್ಲಿ , ವಿವಿಧ ಆಯಾಮಗಳಲ್ಲಿ ಅತ್ಯುನ್ನತ ಮಟ್ಟದ ಪ್ರಾವೀಣ್ಯತೆಯನ್ನು ತೋರಿಸಿದ್ದು, ಅವುಗಳನ್ನು ನಿಭಾಯಿಸುವಲ್ಲಿ ಸ್ಥಿತಿ ಸ್ಥಾಪಕತ್ವವನ್ನು ಹೊಂದಿದೆ ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.


ಯಾವುದೇ ಯುದ್ಧ, ಸಂಘರ್ಷಗಳಲ್ಲಿ ನಮ್ಮ ಸೇನೆಯ ಯೋಧರು ಮತ್ತು ಅಧಿಕಾರಿಗಳು ದಿಟ್ಟ ಉತ್ತರ ನೀಡಿದ್ದಾರೆ. ಗಡಿ ರಕ್ಷಣೆ ವಿಚಾರದಲ್ಲಿ, ಉಗ್ರರನ್ನು ಸದೆಬಡಿಯುವ ವಿಚಾರದಲ್ಲಾಗಲಿ ವೃತ್ತಿಪರವಾಗಿ ವರ್ತಿಸಿದ್ದಾರೆ. ದೇಶಿ ನಿರ್ಮಿತ ತಂತ್ರಜ್ಞಾನವನ್ನು ಸಹ ಸೇನೆ ಸದುಪಯೋಗಪಡಿಸಿಕೊಳ್ಳುತ್ತಿದೆ ಎಂದರು.


72ನೇ ಸೇನಾ ದಿನದ ಅಂಗವಾಗಿ ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ, ವಾಯುಪಡೆ ಮುಖ್ಯಸ್ಥ ಚೀಫ್ ಮಾರ್ಷಲ್ ಆರ್ ಕೆಎಸ್ ಭದೌರಿಯಾ ಮತ್ತು ನೌಕೌಪಡೆ ಮುಖ್ಯಸ್ಥ ಚೀಫ್ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಇಂದು ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಅಗಲಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು.


ಭಾರತೀಯ ಸೇನಾ ದಿನದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಭಾರತೀಯ ಸೇನೆಯ ಸಿಬ್ಬಂದಿಗೆ ಶುಭಾಶಯ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್