ದೇಶ

ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಿ: ಭಾರತೀಯ ಮುಸ್ಲಿಂ ಲೀಗ್ ಸಂಘಟನೆಯಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ  

ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) 2019ಕ್ಕೆ ತಡೆಯೊಡ್ಡಬೇಕೆಂದು ಭಾರತೀಯ ಮುಸ್ಲಿಂ ಲೀಗ್ ಸಂಘಟನೆ(ಐಯುಎಂಎಲ್)ಗುರುವಾರ ಎರಡು ಹೊಸ ಅರ್ಜಿ ಸಲ್ಲಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) 2019ಕ್ಕೆ ತಡೆಯೊಡ್ಡಬೇಕೆಂದು ಭಾರತೀಯ ಮುಸ್ಲಿಂ ಲೀಗ್ ಸಂಘಟನೆ(ಐಯುಎಂಎಲ್)ಗುರುವಾರ ಎರಡು ಹೊಸ ಅರ್ಜಿ ಸಲ್ಲಿಸಿದೆ.
ದೇಶಾದ್ಯಂತ ರಾಷ್ಟ್ರೀಯ ಪೌರತ್ವ ದಾಖಲಾತಿ(ಎನ್ಆರ್ ಸಿ)ಯನ್ನು ಜಾರಿಗೆ ತರುವುದರ ಬಗ್ಗೆ ಸ್ಪಷ್ಟತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಸಹ ಅದು ನ್ಯಾಯಾಲಯವನ್ನು ಕೋರಿದೆ.


ಸಿಎಎಯು ಎನ್ ಆರ್ ಸಿಗೆ ಪೂರ್ವಗಾಮಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಸಂದರ್ಭಗಳಲ್ಲಿ ಹೇಳಿರುವುದನ್ನು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ಕಿರನ್ ರಿಜಿಜು ರಾಜ್ಯಸಭೆಯಲ್ಲಿ, ರಾಷ್ಟ್ರೀಯ ಜನಸಂಖ್ಯಾ ದಾಖಲಾತಿ(ಎನ್ ಪಿಆರ್) ಎನ್ ಆರ್ ಸಿಗೆ ಮೊದಲ ಹೆಜ್ಜೆ ಎಂದು ಹೇಳಿರುವುದನ್ನು ಸಹ ಮುಸ್ಲಿಂ ಲೀಗ್ ಅರ್ಜಿಯಲ್ಲಿ ನಮೂದಿಸಿದೆ.


ಪ್ರಧಾನ ಮಂತ್ರಿ, ಗೃಹ ಸಚಿವರು, ಕಾನೂನು ಸಚಿವರು ನಂತರ ಎನ್ ಆರ್ ಸಿ ಯೋಜನೆಯನ್ನು ಹಾಗೂ ಎನ್ ಪಿಆರ್ ಮತ್ತು ಎನ್ ಆರ್ ಸಿ ನಡುವಿನ ಸಂಬಂಧವನ್ನು ನಿರಾಕರಿಸಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ದೇಶಾದ್ಯಂತ ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನಲೆಯಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಒಟ್ಟಾರೆ ಇದರಲ್ಲಿ ವ್ಯಾಪಕ ಗೊಂದಲಗಳಿದ್ದು ದೇಶದ ಜನರಲ್ಲಿ ಒಟ್ಟಾರೆ ಗೊಂದಲ, ಭಯ ಉಂಟಾಗಿದೆ, ಹೀಗಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡುವವರೆಗೆ ಎನ್ ಆರ್ ಸಿ ಮತ್ತು ಎನ್ ಪಿಆರ್ ಪ್ರಕ್ರಿಯೆಗಳಿಗೆ ತಡೆಯೊಡ್ಡಬೇಕೆಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ' 2025 ವಿಧಾನಸಭೆಯಲ್ಲಿ ಮಂಡನೆ!

ಭಾರತ ಬ್ರಿಕ್ಸ್ ಕರೆನ್ಸಿ ಬೇಡ ಎಂದದ್ದೇಕೆ? (ಹಣಕ್ಲಾಸು)

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

SCROLL FOR NEXT