ಡಿವೈಎಸ್'ಪಿ ದೇವೀಂದರ್ ಸಿಂಗ್ 
ದೇಶ

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ. 

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ. 

ಉಗ್ರರ ಜೊತೆ ಗುರುತಿಸಿಕೊಂಡ ಕಾರಣಕ್ಕೆ ಅಮಾನತು ಶಿಕ್ಷೆಗೆ ಗುರಿಯಾಗಿರುವ ದೇವೀಂದರ್ ಸಿಂಗ್, ನಂಬಿಕೆ ದ್ರೋಹ ಮತ್ತು ಪೊಲೀಸ್ ಪಡೆಗೆ ಅಪಖ್ಯಾತಿ ತಂದಿದ್ದಾರೆ. ಈ ಕಾರಣಕ್ಕಾಗಿ ಅವರ ಶೌರ್ಯ ಪದಕವನ್ನು ಹಿಂಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ದವೀಂದರ್ ಸಿಂಗ್ ಅವರಿಗೆ 2018ರಲ್ಲಿ ಪೊಲೀಸ್ ಶೌರ್ಯ ಪದಕವನ್ನು ನೀಡಿ ಗೌರವಿಸಲಾಗಿತ್ತು. 


ಏನಿದು ಪ್ರಕರಣ?
ನವೀದ್ ಅಹಮದ್ ಶಾ ಅಲಿಯಾಸ್ ನವೀದಿ ಬಾಬು ಎಂಬಾತ ಪೊಲೀಸ್ ಪೇದೆಯಾಗಿದ್ದ. 2017ರಲ್ಲಿ ಕರ್ತವ್ಯ ತ್ಯಜಿಸಿದ್ದ ಈತ 4 ಬಂದೂಕುಗಳನ್ನು ಕದ್ದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ. ಪೊಲೀಸ್ ಸಿಬ್ಬಂದಿ, ನಾಗರೀಕರ ಹತ್ಯೆ ಪ್ರಕರಣಗಳಲ್ಲಿಯೂ ಈತ ಭಾಗಿಯಾಗಿದ್ದ. ಹೀಗಾಗಿ ನವೀದ್ ಗಾಗಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. 

ನವೀದ್ ಹಾಗೂ ಮತ್ತೊಬ್ಬ ಉಗ್ರ ಜಮ್ಮುವಿನತ್ತ ಕಾರಿನಲ್ಲಿ ತೆರಳುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಾಕಾ ಬಂಧಿ ಕಾರಿ ಐ10 ಕಾರೊಂದನ್ನು ತಪಾಸಣೆ ನಡೆಸಿದ್ದರು. ಈ ವೇಳೆ ಪೊಲೀಸರಿಗೆ ಅಚ್ಛರಿಯಾಗಿದೆ. ಕಾರಿನಲ್ಲಿ ಉಗ್ರರೊಂದಿಗೆ ಹಾಲಿ ಡಿವೈಎಸ್ಪಿ ದೇವೀಂದರ್ ಸಿಂಗ್ ಕೂಡ ಇರುವುದು ಕಂಡು ಬಂದಿತ್ತು. ಈ ವೇಳೆ ಮೂವರನ್ನೂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇದೇ ಕಾರಿನಲ್ಲಿ ಉಗ್ರರ ಪರ ಕಾರ್ಯನಿರ್ವಹಿಸುತ್ತಿದ್ದ ವಕೀಲರೊಬ್ಬರೂ ಕೂಡ ಸಿಕ್ಕಿಬಿದ್ದಿದ್ದಾರೆಂದು ವರದಿಗಳು ತಿಲಿಸಿವೆ. 

ಪ್ರಸ್ತುತ ಬಂಧನಕ್ಕೊಳಗಾಗಿರುವ ಡಿವೈಎಸ್ಪಿ ಸಿಂಗ್ ಅವರು, 1990ರಿಂದಲೂ ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಭಾಗವಿಸಿದ್ದರು. ಇದೀಗ ಉಗ್ರರ ಜೊತೆಗೆ ಸಿಕ್ಕಿಬಿದ್ದಿರುವುದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT