ಡಿವೈಎಸ್'ಪಿ ದೇವೀಂದರ್ ಸಿಂಗ್ 
ದೇಶ

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ. 

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ. 

ಉಗ್ರರ ಜೊತೆ ಗುರುತಿಸಿಕೊಂಡ ಕಾರಣಕ್ಕೆ ಅಮಾನತು ಶಿಕ್ಷೆಗೆ ಗುರಿಯಾಗಿರುವ ದೇವೀಂದರ್ ಸಿಂಗ್, ನಂಬಿಕೆ ದ್ರೋಹ ಮತ್ತು ಪೊಲೀಸ್ ಪಡೆಗೆ ಅಪಖ್ಯಾತಿ ತಂದಿದ್ದಾರೆ. ಈ ಕಾರಣಕ್ಕಾಗಿ ಅವರ ಶೌರ್ಯ ಪದಕವನ್ನು ಹಿಂಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ದವೀಂದರ್ ಸಿಂಗ್ ಅವರಿಗೆ 2018ರಲ್ಲಿ ಪೊಲೀಸ್ ಶೌರ್ಯ ಪದಕವನ್ನು ನೀಡಿ ಗೌರವಿಸಲಾಗಿತ್ತು. 


ಏನಿದು ಪ್ರಕರಣ?
ನವೀದ್ ಅಹಮದ್ ಶಾ ಅಲಿಯಾಸ್ ನವೀದಿ ಬಾಬು ಎಂಬಾತ ಪೊಲೀಸ್ ಪೇದೆಯಾಗಿದ್ದ. 2017ರಲ್ಲಿ ಕರ್ತವ್ಯ ತ್ಯಜಿಸಿದ್ದ ಈತ 4 ಬಂದೂಕುಗಳನ್ನು ಕದ್ದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ. ಪೊಲೀಸ್ ಸಿಬ್ಬಂದಿ, ನಾಗರೀಕರ ಹತ್ಯೆ ಪ್ರಕರಣಗಳಲ್ಲಿಯೂ ಈತ ಭಾಗಿಯಾಗಿದ್ದ. ಹೀಗಾಗಿ ನವೀದ್ ಗಾಗಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. 

ನವೀದ್ ಹಾಗೂ ಮತ್ತೊಬ್ಬ ಉಗ್ರ ಜಮ್ಮುವಿನತ್ತ ಕಾರಿನಲ್ಲಿ ತೆರಳುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಾಕಾ ಬಂಧಿ ಕಾರಿ ಐ10 ಕಾರೊಂದನ್ನು ತಪಾಸಣೆ ನಡೆಸಿದ್ದರು. ಈ ವೇಳೆ ಪೊಲೀಸರಿಗೆ ಅಚ್ಛರಿಯಾಗಿದೆ. ಕಾರಿನಲ್ಲಿ ಉಗ್ರರೊಂದಿಗೆ ಹಾಲಿ ಡಿವೈಎಸ್ಪಿ ದೇವೀಂದರ್ ಸಿಂಗ್ ಕೂಡ ಇರುವುದು ಕಂಡು ಬಂದಿತ್ತು. ಈ ವೇಳೆ ಮೂವರನ್ನೂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇದೇ ಕಾರಿನಲ್ಲಿ ಉಗ್ರರ ಪರ ಕಾರ್ಯನಿರ್ವಹಿಸುತ್ತಿದ್ದ ವಕೀಲರೊಬ್ಬರೂ ಕೂಡ ಸಿಕ್ಕಿಬಿದ್ದಿದ್ದಾರೆಂದು ವರದಿಗಳು ತಿಲಿಸಿವೆ. 

ಪ್ರಸ್ತುತ ಬಂಧನಕ್ಕೊಳಗಾಗಿರುವ ಡಿವೈಎಸ್ಪಿ ಸಿಂಗ್ ಅವರು, 1990ರಿಂದಲೂ ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಭಾಗವಿಸಿದ್ದರು. ಇದೀಗ ಉಗ್ರರ ಜೊತೆಗೆ ಸಿಕ್ಕಿಬಿದ್ದಿರುವುದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT