ದೇಶ

ಹುಬ್ಬಳ್ಳಿಯಲ್ಲಿ ಅಮಿತ್ ಶಾ ಕಾರ್ಯಕ್ರಮ: ಟೊಂಗೆ ಕಡಿಯುವ ಬದಲು ಮರಗಳನ್ನೇ ನೆಲಕ್ಕೆ ಉರುಳಿಸಿದರು! 

Srinivas Rao BV

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳನ್ನು ಕಡಿದು ಹಾಕಲಾಗಿದೆ. 

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಜ.18 ಕ್ಕೆ ಬೃಹತ್ ಸಮಾವೇಶ ನಡೆಯಲಿದ್ದು, ಭದ್ರತಾ ದೃಷ್ಟಿಯಿಂದ ಮರಗಳ ಕೊಂಬೆಗಳನ್ನು ಕಡಿಯುವುದರ ಬದಲು ಪಾಲಿಕೆ ಸಿಬ್ಬಂದಿಗಳು ಮರಗಳನ್ನೇ ಕಡಿದು ಹಾಕಿದ್ದಾರೆ. 

ಪಾಲಿಕೆ ಸಿಬ್ಬಂದಿಗಳ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈದಾನದಕ್ಕೆ ಹೊಂದಿಕೊಂಡಿರುವ ಕೊಪ್ಪಿಕರ ರಸ್ತೆಯ ಬಳಿಯ ಗಿಡಮರಗಳ ಟೊಂಗೆ ಕಡಿಯಲು ಸಚಿವ ಅಮಿತ್ ಶಾ ಅವರಿಗೆ ಭದ್ರತೆ ನೀಡುವ ಜವಾಬ್ದಾರಿ ಹೊತ್ತಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಪಾಲಿಕೆ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದರು. ಆದರೆ ಪಾಲಿಕೆ ಸಿಬ್ಬಂದಿಗಳು ಮರಗಳನ್ನೇ ಕಡಿದು ಎಡವಟ್ಟು ಮಾಡಿದ್ದಾರೆ. 

SCROLL FOR NEXT