ಹುಬ್ಬಳ್ಳಿಯಲ್ಲಿ ಅಮಿತ್ ಶಾ ಕಾರ್ಯಕ್ರಮ: ಟೊಂಗೆ ಕಡಿಯುವ ಬದಲು ಮರಗಳನ್ನೇ ನೆಲಕ್ಕೆ ಉರುಳಿಸಿದರು! 
ದೇಶ

ಹುಬ್ಬಳ್ಳಿಯಲ್ಲಿ ಅಮಿತ್ ಶಾ ಕಾರ್ಯಕ್ರಮ: ಟೊಂಗೆ ಕಡಿಯುವ ಬದಲು ಮರಗಳನ್ನೇ ನೆಲಕ್ಕೆ ಉರುಳಿಸಿದರು! 

ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳನ್ನು ಕಡಿದು ಹಾಕಲಾಗಿದೆ. 

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳನ್ನು ಕಡಿದು ಹಾಕಲಾಗಿದೆ. 

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಜ.18 ಕ್ಕೆ ಬೃಹತ್ ಸಮಾವೇಶ ನಡೆಯಲಿದ್ದು, ಭದ್ರತಾ ದೃಷ್ಟಿಯಿಂದ ಮರಗಳ ಕೊಂಬೆಗಳನ್ನು ಕಡಿಯುವುದರ ಬದಲು ಪಾಲಿಕೆ ಸಿಬ್ಬಂದಿಗಳು ಮರಗಳನ್ನೇ ಕಡಿದು ಹಾಕಿದ್ದಾರೆ. 

ಪಾಲಿಕೆ ಸಿಬ್ಬಂದಿಗಳ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈದಾನದಕ್ಕೆ ಹೊಂದಿಕೊಂಡಿರುವ ಕೊಪ್ಪಿಕರ ರಸ್ತೆಯ ಬಳಿಯ ಗಿಡಮರಗಳ ಟೊಂಗೆ ಕಡಿಯಲು ಸಚಿವ ಅಮಿತ್ ಶಾ ಅವರಿಗೆ ಭದ್ರತೆ ನೀಡುವ ಜವಾಬ್ದಾರಿ ಹೊತ್ತಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಪಾಲಿಕೆ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದರು. ಆದರೆ ಪಾಲಿಕೆ ಸಿಬ್ಬಂದಿಗಳು ಮರಗಳನ್ನೇ ಕಡಿದು ಎಡವಟ್ಟು ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT