ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ! 
ದೇಶ

ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ! 

ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

ರಾಯ್ ಬರೇಲಿ: ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

ಜ.04 ರಂದು ಈ ಹತ್ಯೆ ಸಂಭವಿಸಿದೆ. ಆದರೆ ಜ.14 ರಂದು ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಘಟನೆಗೆ ಸಾಕ್ಷಿಯಾಗಿದ್ದ ಸಂತ್ರಸ್ತೆ ಊರ್ಮಿಳಾ ಅವರ ಹಿರಿಯ ಮಗಳು ತಾಯಿಯ ತವರುಮನೆಗೆ ತೆರಳಿ ಘಟನೆಯನ್ನು ವಿವರಿಸಿದ್ದಾಳೆ. ಈ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ. 

ಕುಟುಂಬ ಸದಸ್ಯರ ದೂರನ್ನು ಆಧರಿಸಿ ಪೊಲೀಸರು ಹತ್ಯೆಯ ಆರೋಪಿ ರವೀಂದ್ರ ಕುಮಾರ್ (35) ನ್ನು ಬಂಧಿಸಿದ್ದಾರೆ. ಆರೋಪಿ ರವೀಂದ್ರ ಕುಮಾರ್ ಮತ್ತು ಊರ್ಮಿಳಾ 2011 ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆದರೆ ರವೀಂದ್ರ ಕುಮಾರ್ ಮನೆಯಲ್ಲಿ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಈ ಬಾರಿಯೂ ಊರ್ಮಿಳ ಹೆಣ್ಣುಮಗುವಿಗೆ ಜನ್ಮ ನೀಡಬಹುದೆಂದು ಶಂಕಿಸಿ ಆಕೆಯನ್ನು ಹತ್ಯೆ ಮಾಡಿ ದೇಹ, ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿ, ದಹನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಿಕ್ಕ ಸಾಕ್ಶ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ