ನಿರ್ಭಯಾ ಅಪರಾಧಿಗಳು 
ದೇಶ

ನಿರ್ಭಯಾ ಪ್ರಕರಣ: ಅಪರಾಧಿಯ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಗೆ ರವಾನೆ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. 

ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಮರಣ ದಂಡನೆ ಶಿಕ್ಷೆಯಾಗಿದ್ದು ಇದರಲ್ಲಿ ಒಬ್ಬನಾದ ಮುಖೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.

"ಗೃಹ ಸಚಿವಾಲಯವು ಮುಖೇಶ್ ಸಿಂಗ್  ಕ್ಷಮಾದಾನ ಅರ್ಜಿಯನ್ನು ಷ್ಟ್ರಪತಿಗೆ ರವಾನಿಸಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶಿಫಾರಸನ್ನು ಸಚಿವಾಲಯಪುನರುಚ್ಚರಿಸಿದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಸರ್ಕಾರ ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಖೇಶ್ ಕ್ಷಮಾದಾನ ಅರ್ಜಿಯನ್ನು ಗುರುವಾರ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು.ಮುಖೇಶ್ ಸಿಂಗ್ (32), ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಮತ್ತು ಪವನ್ ಗುಪ್ತಾ (25) ಎಂಬ ನಾಲ್ವರು ಆರೋಪಿಗಳನ್ನು ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಬೇಕಿತ್ತು.

ದೆಹಲಿ ನ್ಯಾಯಾಲಯವು ಜನವರಿ 7 ರಂದು ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಡೆತ್ ವಾರಂಟ್ ಹೊರಡಿಸಿತ್ತು. ಆದರೆ, ಮುಖೇಶ್ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರಿಂದ ಜನವರಿ 22 ರಂದು ಅಪರಾಧಿಗಳ ಮರಣದಂಡನೆ ನಡೆಯುವುದಿಲ್ಲ ಎಂದು ದೆಹಲಿ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT