ಅಮೆರಿಕಾದಲ್ಲಿ ರಮೇಶ್ ಅರವಿಂದ್: ಅನಿವಾಸಿ ಕನ್ನಡಿಗರಿಗೆ ಚಿತ್ರರಂಗದ ಕುರಿತು ವಿಶೇಷ ತರಬೇತಿ 
ದೇಶ

ಅಮೆರಿಕಾದಲ್ಲಿ ರಮೇಶ್ ಅರವಿಂದ್: ಅನಿವಾಸಿ ಕನ್ನಡಿಗರಿಗೆ ಚಿತ್ರರಂಗದ ಕುರಿತು ವಿಶೇಷ ತರಬೇತಿ

ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗಾಗಿ ಅದರಲ್ಲೂ ಚಲನಚಿತ್ರರಂಗದಲ್ಲಿ ತೊಡಗಿಕೊಳ್ಳಬೇಕೆಂಬ ಆಸಕ್ತಿಯುಳ್ಳವರಿಗಾಗಿ ಎರಡು ದಿನಗಳ ಕಾಲ ವಿಶೇಷ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ

ಬೆಂಗಳೂರು: ನಟ ರಮೇಶ್ ಅರವಿಂದ್ ಸದ್ಯ ಬಟರ್‌ಫ್ಲೈ, 100, ಶಿವಾಜಿ ಸೂರತ್ಕಲ್, ಬೈರಾದೇವಿ ಹೀಗೆ ಹಲವಾರು ಚಲನಚಿತ್ರಗಳ ಕೆಲಸಗಳಲ್ಲಿ ತುಂಬಾನೇ ಬ್ಯುಸಿಯಾಗಿರೋ ಕಲಾವಿದ ಇದರ ನಡುವೆಯೂ ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗಾಗಿ ಅದರಲ್ಲೂ ಚಲನಚಿತ್ರರಂಗದಲ್ಲಿ ತೊಡಗಿಕೊಳ್ಳಬೇಕೆಂಬ ಆಸಕ್ತಿಯುಳ್ಳವರಿಗಾಗಿ ಎರಡು ದಿನಗಳ ಕಾಲ ವಿಶೇಷ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ

ನಾರ್ಥ ಕ್ಯಾಲಿಫೋರ್ನಿಯಾದ ಕನ್ನಡ ಕೂಟದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ನಾಳೆ, ಜ೧೮ರಂದು “ಕಾಫಿ, ಇಡ್ಲಿ ಅಂಡ್ ಮೂವೀಸ್ “ ಎಂಬ ಹೆಸರಿನ ಮಾಸ್ಟರ್ ಕ್ಲಾಸಸ್ ಇನ್ ಫಿಲಂ ಮೇಕಿಂಗ್ ಬೈ ರಮೆಶ್ ಅರವಿಂದ್ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಒಂದು ಕಥೆಯನ್ನು ಹೇಗೆ ಆಯ್ಕೆ ಮಾಡಿಕೊಳ್ಳುವುದು, ಅದರ ಚಿತ್ರಕಥೆಯನ್ನು ಹೇಗೆ ಬರೆಯೋದು, ಆರ್ಟಿಸ್ಟ್‌ನ್ನು ಹೇಗೆ ಸೆಲೆಕ್ಟ್ ಮಾಡೋದು ಮತ್ತು ಅವರಿಂದ ಹೇಗೆ ಆಕ್ಟಿಂಗ್ ತೆಗೆಸೋದು. ಮ್ಯೂಸಿಕ್ ಡೈರೆಕ್ಟರ್ ಜೊತೆ, ಕ್ಯಾಮರಾಮನ್ ಜೊತೆ ಹೇಗೆ ಕೊಲ್ಯಾಬ್ರೇಟ್ ಮಾಡೋದು ಎಂಬುದರ ಬಗ್ಗೆ ಇಲ್ಲಿ ವಿವರಣೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತ ಎನ್‌ಆರ್‌ಐಗಳೆಲ್ಲರೂ ಭಾಗವಹಿಸಲಿದ್ದಾರೆ. ಅದಲ್ಲದೆ ಒಂದು ಸಿನಿಮಾವನ್ನು ಹೇಗೆಲ್ಲ ಮಾರ್ಕೆಟಿಂಗ್ ಮಾಡಬಹುದು ಎನ್ನುವುದರ ಬಗ್ಗೆ ಕೂಡ ರಮೇಶ್ ಅರವಿಂದ್ ಅವರು ಇದರಲ್ಲಿ ತಿಳಿಸಿಕೊಡಲಿದ್ದಾರೆ.

ಭಾನುವಾರ (19ರಂದು) ಪ್ರೀತಿಯಿಂದ ರಮೇಶ್ ಎಂಬ ವಿಶೇಷ ಷೋವನ್ನು ಆಯೋಜನೆ ಮಾಡಲಾಗಿದೆ. ಇದರಲ್ಲಿ ಕನ್ನಡ ಚಿತ್ರರಂಗ ಆರಂಭದಿಂದಲೂ ನಡೆದುಬಂದ ಹಾದಿಯನ್ನು ಹಾಗೂ ನಟ ರಮೇಶ್ ಅರವಿಂದ್ ಅವರ ಸಿನಿಮಾ ರಂಗದ ಲೈಫ್ ಸ್ಟೋರಿಯನ್ನು ಈ ಶೋನಲ್ಲಿ ನಿರೂಪಿಸಲಾಗುವುದು. ಈ ಕಾರ್ಯಕ್ರಮಕ್ಕಾಗಿ ಬುಧವಾರ ರಾತ್ರಿಯೇ ರಮೇಶ್ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?