ಕಾಶ್ಮೀರ ವಿಷಯದಲ್ಲಿ ಭಾರತದ ನೀತಿ ಬಗ್ಗೆ ರಷ್ಯಾ ಎಂದಿಗೂ ಸಂದೇಹ ಪಡುವುದಿಲ್ಲ-ರಷ್ಯಾ ರಾಯಭಾರಿ 
ದೇಶ

ಕಾಶ್ಮೀರ ವಿಷಯದಲ್ಲಿ ಭಾರತದ ನೀತಿ ಬಗ್ಗೆ ರಷ್ಯಾ ಎಂದಿಗೂ ಸಂದೇಹ ಪಡುವುದಿಲ್ಲ-ರಷ್ಯಾ ರಾಯಭಾರಿ

ಕಾಶ್ಮೀರ ಕುರಿತ ವಿಷಯದಲ್ಲಿ ಭಾರತದ ನೀತಿಯ ಬಗ್ಗೆ ತಾನು ಎಂದೂ ಸಂದೇಹ ಪಡುವುದಿಲ್ಲ ಎಂದು ರಷ್ಯಾ ಶುಕ್ರವಾರ ಹೇಳುವುದರೊಂದಿಗೆ ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸುವುದಕ್ಕೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ಹೊಸ ಕ್ರಮಗಳಿಗೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. 

ನವದೆಹಲಿ: ಕಾಶ್ಮೀರ ಕುರಿತ ವಿಷಯದಲ್ಲಿ ಭಾರತದ ನೀತಿಯ ಬಗ್ಗೆ ತಾನು ಎಂದೂ ಸಂದೇಹ ಪಡುವುದಿಲ್ಲ ಎಂದು ರಷ್ಯಾ ಶುಕ್ರವಾರ ಹೇಳುವುದರೊಂದಿಗೆ ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸುವುದಕ್ಕೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ಹೊಸ ಕ್ರಮಗಳಿಗೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. 

‘ಕಾಶ್ಮೀರ ಕುರಿತು ಭಾರತದ ನೀತಿಯ ಬಗ್ಗೆ ಸಂದೇಹ ಪಡುವವರು, ಭಾರತದ ನೀತಿಗಳ ಬಗ್ಗೆ ಸಂದೇಹ ಪಡುವವರು ತಾವಾಗಿಯೇ ಅಲ್ಲಿಗೆ ಹೋಗಿ ಅಲ್ಲಿನ ಸ್ಥಿತಿ ನೋಡಬೇಕು. ಆದರೆ, ನಾವು ಎಂದೂ ಸಂದೇಹ ಪಡುವುದಿಲ್ಲ.’ ಎಂದು ಭಾರತದಲ್ಲಿನ ರಷ್ಯಾ ರಾಯಭಾರಿ ನಿಕೊಲೆ ಕುಡಶೆವ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದ್ದಾರೆ. 

ಕಾಶ್ಮೀರ ವಿಷಯ ಭಾರತದ ಆಂತರಿಕ ವಿಷಯವಾಗಿದೆ. ಅಲ್ಲದೆ, ರಷ್ಯಾ ಪ್ರದೇಶಕ್ಕೂ ಅದು ಒಳಪಡುವುದಿಲ್ಲ. ಆದ್ದರಿಂದ ಭಾರತದ ಆಂತರಿಕ ವಿಷಯಗಳ ಬಗ್ಗೆ ಸಂದೇಹ ಪಡುವುದಿಲ್ಲ ಎಂದು ಅವರು ಹೇಳಿದ್ದಾರೆ. ‘2020ನೇ ವರ್ಷ ಭಾರತ-ರಷ್ಯಾ ನಡುವಿನ ಹೊಸ ಒಪ್ಪಂದಗಳ ಮತ್ತು ಯೋಜನೆಗಳ ಅನುಷ್ಠಾನದ ವರ್ಷವಾಗಲಿದೆ. ರಷ್ಯಾ ಮತ್ತು ಭಾರತ ನಡುವಿನ ಕಾರ್ಯತಂತ್ರ ಪಾಲುದಾರಿಕೆಯ 20ನೇ ವರ್ಷವೂ ಇದಾಗಿದೆ. ಭಾರತ ಪ್ರಧಾನಿ ನರೇಂದ್ರಮೋದಿ ಹೇಳಿರುವಂತೆ, ಈ ವರ್ಷ ರಷ್ಯಾ-ಭಾರತ ನಡುವಿನ ಒಪ್ಪಂದಗಳು ಮತ್ತು ಯೋಜನೆಗಳ ಅನುಷ್ಠಾನ ವರ್ಷವಾಗಲಿದೆ.’ ಎಂದು ಕುಡಶೆವ್ ಹೇಳಿದ್ದಾರೆ. 

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕಾಶ್ಮೀರಕ್ಕೆ ತಾವು ಏಕೆ ತೆರಳಬೇಕು ಎಂದು ತಮಗೆ ಅನಿಸುತ್ತಿಲ್ಲ. ಜಮ್ಮು-ಕಾಶ್ಮೀರ ಕುರಿತು ಹೇಳುವುದಾದರೆ ತೀರ್ಮಾನಗಳು ಭಾರತದ ಸಂವಿಧಾನದಂತೆ ಆಂತರಿಕ ವಿಷಯವಾಗಿವೆ.’ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ, ಇದುವರೆಗೆ ರಷ್ಯಾ ರಕ್ಷಣಾ ಪಡೆಗಳಿಗೆ ಮಾತ್ರ ಲಭ್ಯವಿದ್ದ ಐದು ಎಸ್-400 ವೈಮಾನಿಕ ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳನ್ನು 2025ರ ವೇಳೆಗೆ ಭಾರತಕ್ಕೆ ಪೂರೈಸಲಾಗುವುದು ಎಂದು ರಷ್ಯಾ ಹೇಳಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ಮೋದಿ ಅವರು ಮೇ ತಿಂಗಳಲ್ಲಿ ರಷ್ಯಾಗೆ ಭೇಟಿ ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT