ದೇಶ

ಸೋನಿಯಾ ಗಾಂಧಿ ರಾಜೀವ್ ಹಂತಕರನ್ನು ಕ್ಷಮಿಸಿದಂತೆ ನಿರ್ಭಯಾ ಅಪರಾಧಿಗಳನ್ನು ಕ್ಷಮಿಸಿಬಿಡಿ: ವಕೀಲೆ ಇಂದಿರಾ ಜೈಸಿಂಗ್

ತಮ್ಮ ಮಗಳನ್ನು ಅತ್ಯಾಚಾರವೆಸಗಿ ಸಾವಿಗೆ ಕಾರಣರಾದ ಅಪರಾಧಿಗಳನ್ನು ಕ್ಷಮಿಸುವಂತೆ ನಿರ್ಭಯಾ ತಾಯಿ ಆಶಾ ದೇವಿಗೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿರುವುದು ವ್ಯಾಪಕ ಟೀಕೆ ಮತ್ತು ಸುದ್ದಿಗೆ ಗ್ರಾಸವಾಗಿದೆ. 

ನವದೆಹಲಿ: ತಮ್ಮ ಮಗಳನ್ನು ಅತ್ಯಾಚಾರವೆಸಗಿ ಸಾವಿಗೆ ಕಾರಣರಾದ ಅಪರಾಧಿಗಳನ್ನು ಕ್ಷಮಿಸುವಂತೆ ನಿರ್ಭಯಾ ತಾಯಿ ಆಶಾ ದೇವಿಗೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿರುವುದು ವ್ಯಾಪಕ ಟೀಕೆ ಮತ್ತು ಸುದ್ದಿಗೆ ಗ್ರಾಸವಾಗಿದೆ. 


ಅಪರಾಧಿಗಳನ್ನು ಗಲ್ಲಿಗೇರಿಸುವ ವಿಚಾರದಲ್ಲಿ ಆಗುತ್ತಿರುವ ವಿಳಂಬ ಕುರಿತು ಸುದ್ದಿಸಂಸ್ಥೆಗಳಿಗೆ ತಮ್ಮ ಬೇಸರ ವ್ಯಕ್ತಪಡಿಸಿದ ಆಶಾ ದೇವಿಯ ಕುರಿತು ಅಡ್ವೊಕೇಟ್ ಜೈಸಿಂಗ್ ಹೀಗೆ ಹೇಳಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ಆಶಾ ದೇವಿ ಸೋನಿಯಾ ಗಾಂಧಿಯವರನ್ನು ಉದಾಹರಣೆಯನ್ನಾಗಿ ತೆಗೆದುಕೊಳ್ಳಬೇಕು. ಸೋನಿಯಾ ಗಾಂಧಿಯವರು ತಮ್ಮ ಪತಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ್ದ ನಳಿನಿಗೆ ಕ್ಷಮೆ ನೀಡಿದ್ದಾರೆ. ಅದೇ ರೀತಿ ಆಶಾ ದೇವಿಯವರು ಕೂಡ ತಮ್ಮ ಮಗಳ ಮೇಲೆ ಅತ್ಯಾಚಾರವೆಸಗಿ ಸಾವಿಗೆ ಕಾರಣರಾದವನ್ನು ಕ್ಷಮಿಸಬೇಕೆಂದು ಹೇಳಿದ್ದಾರೆ. 


ಆಶಾ ದೇವಿಯವರ ನೋವು ನನಗೆ ಅರ್ಥವಾಗುತ್ತದೆ, ಆದರೂ ಅವರು ಸೋನಿಯಾ ಗಾಂಧಿಯವರನ್ನು ನೋಡಿ ಕಲಿಯಬೇಕು. ತಮ್ಮ ಪತಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಮರಣದಂಡನೆ ಶಿಕ್ಷೆ ಕೊಡಿಸದೆ ಕ್ಷಮಾದಾನ ನೀಡಿದ್ದಾರೆ. ಹಾಗೆಯೇ ಆಶಾ ದೇವಿಯವರು ಅಪರಾಧಿಗಳನ್ನು ಮರಣದಂಡನೆಯಿಂದ ತಪ್ಪಿಸಬೇಕು, ನಾವು ಆಶಾ ದೇವಿ ಪರ ಇದ್ದೇವೆ, ಆದರೆ ಮರಣದಂಡನೆಯನ್ನು ವಿರೋಧಿಸುತ್ತೇವೆ ಎಂದು ಇಂದಿರಾ ಜೈಸಿಂಗ್ ಟ್ವೀಟ್ ಮಾಡಿದ್ದಾರೆ.


1991ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ನಳಿನಿ ಬಂಧನಕ್ಕೊಳಗಾಗಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾಳೆ.


ವಿನಯ್, ಅಕ್ಷಯ್, ಪವನ್ ಮತ್ತು ಮುಕೇಶ್ ಸಿಂಗ್ ಎಂಬುವವರನ್ನು ನಿರ್ಭಯಾ ಅತ್ಯಾಚಾರ ಮತ್ತು ನಂತರ ಸಾವಿನ ಕೇಸಿನಲ್ಲಿ ಅಪರಾಧಿಗಳೆಂದು ದೆಹಲಿ ನ್ಯಾಯಾಲಯ ಘೋಷಿಸಿ ಜನವರಿ 22ರಂದು ಅವರನ್ನು ನೇಣಿಗೇರಿಸುವುದು ಎಂದು ಆದೇಶ ಹೊರಡಿಸಿತ್ತು. ಆದರೆ ಅದರಲ್ಲಿ ಮುಕೇಶ್ ಸಿಂಗ್ ಮತ್ತು ವಿನಯ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರಿಂದ ನ್ಯಾಯಾಲಯ ಇದೀಗ ಫೆಬ್ರವರಿ 1ರಂದು ನೇಣಿಗೇರಿಸುವಂತೆ ಹೊಸ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!