ದೇಶ

'ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಬುದ್ಧಿಜೀವಿಗಳು ದೆವ್ವಗಳು, ಬೆನ್ನುಮೂಳೆ ಇಲ್ಲದವರು':ದಿಲೀಪ್ ಘೋಷ್ 

ತಮ್ಮ ವಿವಾದಾತ್ಮಕ ಹೇಳಿಕೆಗೆ ಹೆಸರಾಗಿರುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಇದೀಗ ಮತ್ತೊಮ್ಮೆ ತಮ್ಮ ಮಾತನ್ನು ಬೇಕಾಬಿಟ್ಟಿಯಾಗಿ ಹರಿಬಿಟ್ಟಿದ್ದಾರೆ. 

ಹೌರಾ:ತಮ್ಮ ವಿವಾದಾತ್ಮಕ ಹೇಳಿಕೆಗೆ ಹೆಸರಾಗಿರುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಇದೀಗ ಮತ್ತೊಮ್ಮೆ ತಮ್ಮ ಮಾತನ್ನು ಬೇಕಾಬಿಟ್ಟಿಯಾಗಿ ಹರಿಬಿಟ್ಟಿದ್ದಾರೆ. 


ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಬುದ್ಧಿಜೀವಿಗಳು ಬೆನ್ನುಮೂಳೆಯಿಲ್ಲದವರು, ದೆವ್ವಗಳು ಮತ್ತು ಬೇರೊಬ್ಬರನ್ನು ನಂಬಿಕೊಂಡು ಜೀವನ ನಡೆಸುವವರು ಎಂದು ನಿನ್ನೆ ರ್ಯಾಲಿಯೊಂದರಲ್ಲಿ ಹೇಳಿದ್ದಾರೆ.


ದಿಲೀಪ್ ಘೋಷ್ ಅವರನ್ನು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷರನ್ನಾಗಿ ಮತ್ತೊಮ್ಮೆ ಪುನರಾಯ್ಕೆ ಮಾಡಲಾಗಿದ್ದು 2023ರವರೆಗೆ ಅವರೇ ಅಧ್ಯಕ್ಷರಾಗಿರುತ್ತಾರೆ. 


ರ್ಯಾಲಿಯಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ರಾಜ್ಯದಿಂದ ಒಂದೇ ಒಂದು ಸ್ಥಾನವನ್ನು ಕೂಡ ಗೆಲ್ಲುವುದಿಲ್ಲ ಎಂದಿದ್ದಾರೆ.


ಚುನಾವಣೆ ಸಮಯದಲ್ಲಿ ನಾವು ಎಲ್ಲಾ 42 ಸೀಟುಗಳನ್ನು ಗೆಲ್ಲುತ್ತೇವೆ, ಬಿಜೆಪಿ ಶೂನ್ಯ ಸೀಟುಗಳನ್ನು ಗೆಲ್ಲಲಿದೆ ಎಂದು ಮಮತಾ ಬ್ಯಾನರ್ಜಿಯವರು ಹೇಳಿದ್ದರು. ಆದರೆ ಫಲಿತಾಂಶ ಬಂದ ಮೇಲೆ ಟಿಎಂಸಿ ರಾಜ್ಯದಿಂದ ಗೆದ್ದಿದ್ದು 22, 2014ರ ಲೋಕಸಭಾ ಚುನಾವಣೆಯಲ್ಲಿ 34 ಸೀಟುಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 2ರಿಂದ 18 ಸ್ಥಾನಗಳಿಗೆ ಏರಿಕೆಯಾಗಿದೆ. 2024ರ ಹೊತ್ತಿಗೆ ದೆಹಲಿಯಲ್ಲಿ ಟಿಎಂಸಿ ನಾಯಕರು ಯಾರೂ ಇರುವುದಿಲ್ಲ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT