ಕಿರುಕುಳಕ್ಕೊಳಗಿದ್ದರೂ ಇಲ್ಲದಿದ್ದರೂ ಈ 3 ದಾಖಲೆಗಳಿಂದ ವಲಸಿಗರಿಗೆ ಸಿಗಲಿದೆ ಭಾರತೀಯ ಪೌರತ್ವ! 
ದೇಶ

ಧಾರ್ಮಿಕ ಕಾರಣಕ್ಕೆ ದೌರ್ಜನ್ಯವಾಗದೇ ಇದ್ದರೂ ಈ 3 ದಾಖಲೆಗಳಿಂದ ವಲಸಿಗರಿಗೆ ಸಿಗಲಿದೆ ಭಾರತೀಯ ಪೌರತ್ವ!

ಸಿಎಎ ಕಾಯ್ದೆಯ ಪ್ರಕಾರ ಬಾಂಗ್ಲಾದ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ದೊರೆಯುವುದು ಧಾರ್ಮಿಕ ಕಿರುಕುಳಕ್ಕೊಳಗಾಗಿರುವವರಿಗೆ ಮಾತ್ರ. ಆದರೆ ಅಸ್ಸಾಂ ನ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮಾ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ. 

ಗುವಾಹಟಿ: ಸಿಎಎ ಕಾಯ್ದೆಯ ಪ್ರಕಾರ ಬಾಂಗ್ಲಾದ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ದೊರೆಯುವುದು ಧಾರ್ಮಿಕ ಕಿರುಕುಳಕ್ಕೊಳಗಾಗಿರುವವರಿಗೆ ಮಾತ್ರ. ಆದರೆ ಅಸ್ಸಾಂ ನ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮಾ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ. 

ಪಾಕ್, ಬಾಂಗ್ಲಾ, ಅಫ್ಘಾನಿಸ್ತಾನಗಳಿಂದ ಬಂದಿರುವ ಮುಸ್ಲಿಮೇತರ ವಲಸಿಗರಿಗೆ ಯಾವುದೇ ಆಧಾರದಲ್ಲೂ, ಅಂದರೆ ಧಾರ್ಮಿಕ ಕಿರುಕುಳದ ಹೊರತಾಗಿಯೂ ಭಾರತಕ್ಕೆ ಬಂದರೆ ಅವರಿಗೆ ಸಿಎಎ ಪ್ರಕಾರ ಭಾರತದ ಪೌರತ್ವಕ್ಕೆ ಅವರು ಅರ್ಹರು ಎಂದು ಹೇಳಿದ್ದಾರೆ. 

ದೆಹಲಿಯಲ್ಲಿ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿರುವ ಶರ್ಮಾ, ಸಿಎಎ ಫಲಾನುಭವಿಗಳು ಬಾಂಗ್ಲಾದೇಶ ಮುಂತಾದ ರಾಷ್ಟ್ರಗಳಲ್ಲಿ ತಾವು ಧಾರ್ಮಿಕ ಕಿರುಕುಳಕ್ಕೆ ಒಳಗಾಗಿದ್ದೇವೆ ಎಂಬುದಕ್ಕೆ ಸಾಕ್ಷ್ಯ ತೋರಿಸಲು ಸಾಧ್ಯವಿಲ್ಲ. ಏಕೆಂದರೆ ಅಲ್ಲಿಗೆ ಹೋಗಿ ಅವರು ಅಲ್ಲಿನ ಪೊಲೀಸ್ ಠಾಣೆಗಳಿಂದ ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ತರಲು ಸಾಧ್ಯವಿಲ್ಲ. ಆದ್ದರಿಂದ ವಲಸಿಗರು ಕೇವಲ ಮೂರು ದಾಖಲೆಗಳನ್ನು ಸಲ್ಲಿಸಿ ಭಾರತದ ಪೌರತ್ವ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ. 

ಸಿಎಎ ವ್ಯಾಪ್ತಿಯಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವವರು 2014 ರ ಡಿ.31ಕ್ಕೂ ಮುನ್ನ ತಾವು ಭಾರತಕ್ಕೆ ಬಂದಿರುವುದಕ್ಕೆ ದಾಖಲೆಗಳನ್ನು ತೋರಿಸಬೇಕು, ತಾವು ಹಿಂದೂ, ಕ್ರೈಸ್ತ, ಬೌದ್ಧ, ಸಿಖ್, ಪಾರ್ಸಿ, ಜೈನರೆನ್ನುವುದಕ್ಕೆ ಪುರಾವೆ ಒದಗಿಸಬೇಕು ಹಾಗೂ ತಾವು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿರುವ ಮೂರು ರಾಷ್ಟ್ರಗಳಿಂದ ಬಂದವರಾಗಿದ್ದೇವೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಹೇಳಿದ್ದಾರೆ. 

ಇದೇ ವೇಳೆ ಸಿಎಎ ಅಡಿಯಲ್ಲಿ ಪೌರತ್ವ ಪಡೆಯುತ್ತಿರುವವರು ಅವರು ಬಂದಿರುವ ದೇಶಗಳಲ್ಲಿ ಧಾರ್ಮಿಕ ಕಾರಣಗಳಿಗೆ ದೌರ್ಜನ್ಯಕ್ಕೆ ಒಳಗಾಗಿದ್ದಾರೆಯೇ ಎಂಬುದನ್ನು ಕೇಂದ್ರ ಸರ್ಕಾರ ತನ್ನ ಸಂಸ್ಥೆಗಳ ಮೂಲಕ ಕಂಡುಕೊಳ್ಳಬೇಕು ಎಂದು ಶರ್ಮಾ ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT