ಅರವಿಂದ್ ಕೇಜ್ರಿವಾಲ್ ರೋಡ್ ಶೋ 
ದೇಶ

ದೆಹಲಿ ಚುನಾವಣೆ: ಕೇಜ್ರೀವಾಲ್ ರೋಡ್ ಶೋ ವಿಳಂಬ, ನಾಮಪತ್ರ ಸಲ್ಲಿಕೆ ನಾಳೆಗೆ ಮುಂದೂಡಿಕೆ

ದೆಹಲಿ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಕೇಜ್ರಿವಾಲ್ ಅವರು ನಿಗದಿಯಂತೆ ಸೋಮವಾರವೇ ನಾಮಪತ್ರ ಸಲ್ಲಿಸಬೇಕಿತ್ತಾದರೂ, ರೋಡ್ ಶೋ ವಿಳಂಬವಾದ್ದರಿಂದ ನಾಳೆಗೆ ಮುಂದೂಡಲಾಗಿದೆ.

ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಗಡುವು ನಿಗದಿಯಾಗಿತ್ತು. ಆದರೆ, ಕೇಜ್ರೀವಾಲ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ನಿಗದಿತ ಸಮಯಕ್ಕಿಂತ ವಿಳಂಬವಾಗಿ ಆಗಮಿಸಿದ್ದರಿಂದ ಅದು ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಕೊನೆಯ ದಿನವೇ ನಾಮಪತ್ರ ಸಲ್ಲಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ನಿಮ್ಮೆಲ್ಲರ ಪ್ರೀತಿಯನ್ನು ನೋಡಿ ನನಗೆ ದಿನರಾತ್ರಿ ಕೆಲಸ ಮಾಡುವ ಸ್ಫೂರ್ತಿ ದೊರೆತಿದೆ. ದೆಹಲಿಯ ಎರಡು ಕೋಟಿ ಜನರ ಕುಟುಂಬದೊಂದಿಗೆ ಮುಂದಿನ ಐದು ವರ್ಷಗಳಲ್ಲಿ ನಾನು ದೆಹಲಿಯನ್ನು ವಿಶ್ವದ ನಂಬರ್ ಒನ್ ನಗರವನ್ನಾಗಿಸಲಿದ್ದೇನೆ" ಎಂದಿದ್ದಾರೆ.

ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ತಮಗೆ ಸಮಯಕ್ಕೆ ಸರಿಯಾಗಿ ಚುನಾವಣಾಧಿಕಾರಿಗಳಕಚೇರಿ ತಲುಪಲು ಸಾಧ್ಯವಾಗಲಿಲ್ಲ. ರೋಡ್ ಶೋ ನಲ್ಲಿ ಜನರನ್ನು ಬಿಟ್ಟು ಹೋಗುವುದು ಹೇಗೆ. ಆದ್ದರಿಂದ ನಾನು ನಾಳೆ ನಾಮಪತ್ರ ಸಲ್ಲಿಸುತ್ತೇನೆ ಎಂದರು. 

'ಜನರ ಸಿಎಂ' ಎಂಬ ಶೀರ್ಷಿಕೆಯ ರೋಡ್ ಶೋ ನಲ್ಲಿ ಎಎಪಿ ಬೆಂಬಲಿಗರು 'ಅಚ್ಚೆ ಬೀತೆ ಪಾಂಚ್ ಸಾಲ್, ಲಗೇ ರಹೋ ಕೇಜ್ರೀವಾಲ್ '( ಐದು ವರ್ಷ ಚೆನ್ನಾಗಿ ಕಳೆಯಿತು, ಕೇಜ್ರಿವಾಲ್ ನೀವು ಮುಂದುವರಿಯಿರಿ) ಎಂಬ ಘೋಷಣೆ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT