ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

'ನನ್ನ ಕೆಲಸಗಳೇನು, ಜವಾಬ್ದಾರಿಗಳೇನು ಎಂದು ನನಗೆ ಗೊತ್ತಿದೆ':ನಿರ್ಮಲಾ ಸೀತಾರಾಮನ್ 

ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಬಜೆಟ್ ಮಂಡನೆಯ ಕುರಿತು ಚರ್ಚೆ ನಡೆಸಲು ಕಳೆದ ಜನವರಿ 9ರಂದು ದೆಹಲಿಯ ನೀತಿ ಆಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಆರ್ಥಿಕ ತಜ್ಞರು, ಅಧಿಕಾರಿಗಳು, ಉದ್ಯಮಿಗಳ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸದೆ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. 

ಚೆನ್ನೈ:ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಬಜೆಟ್ ಮಂಡನೆಯ ಕುರಿತು ಚರ್ಚೆ ನಡೆಸಲು ಕಳೆದ ಜನವರಿ 9ರಂದು ದೆಹಲಿಯ ನೀತಿ ಆಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಆರ್ಥಿಕ ತಜ್ಞರು, ಅಧಿಕಾರಿಗಳು, ಉದ್ಯಮಿಗಳ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸದೆ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. 


ಇದಕ್ಕೀಗ ಸ್ವತಃ ನಿರ್ಮಲಾ ಸೀತಾರಾಮನ್ ಅವರೇ ಉತ್ತರ ಕೊಡುವ ಮೂಲಕ ಟೀಕೆಗಳಿಗೆ ತೆರೆ ಎಳೆದಿದ್ದಾರೆ. ''ಪ್ರಧಾನಿಯವರ ಒಪ್ಪಿಗೆ ಪಡೆದು ಬೇರೊಂದು ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಆದರೆ ವಾಸ್ತವ ಏನು ಎಂದು ತಿಳಿದುಕೊಳ್ಳದೆ ಕೆಲವರು ಸುಮ್ಮನೆ ಟೀಕೆ ಮಾಡುತ್ತಾರೆ. ಮುಂದಿನ ತಿಂಗಳು ಮಂಡನೆಯಾಗಲಿರುವ ಬಜೆಟ್ ಗೆ ಏನು ಮಾಡಬೇಕು, ಹೇಗೆ ಸಿದ್ದತೆ ನಡೆಸಿಕೊಳ್ಳಬೇಕೆಂದು ನನಗೆ ಗೊತ್ತಿದೆ. ನನ್ನ ಕೆಲಸಗಳೇನು, ಜವಾಬ್ದಾರಿಗಳೇನು ಎಂಬುದನ್ನು ಬೇರೆಯವರಿಂದ ಕಲಿತುಕೊಳ್ಳಬೇಕಾಗಿಲ್ಲ'' ಎಂದಿದ್ದಾರೆ.


ಇನ್ನು ನಿರ್ಮಲಾ ಸೀತಾರಾಮನ್ ಅವರು ಪ್ರತಿ ಶುಕ್ರವಾರ ಬಜೆಟ್ ಘೋಷಿಸುತ್ತಾರೆ ಎಂಬ ಹೇಳಿಕೆಗೆ ಅಂತಹ ಟೀಕೆಗಳನ್ನೆಲ್ಲ ಹಗುರವಾಗಿ ತೆಗೆದುಕೊಳ್ಳುತ್ತೇನೆ, ಅಂತವುಗಳನ್ನು ಕೇಳಿದಾಗ ಮನಸ್ಸಿಗೆ ನಿರಾಳವಾಗುತ್ತದೆ, ಒಳ್ಳೆಯ ಮನರಂಜನೆ ಸಿಗುತ್ತದೆ ಎಂದರು.


ಕೆಲವು ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ಹೇಳುತ್ತಿರುವುದು ಅಸಂವಿಧಾನಿಕ, ಸಂಸತ್ತಿನಲ್ಲಿ ಅನುಮೋದನೆಗೊಂಡು ಕಾಯ್ದೆಯಾಗಿ ಜಾರಿಗೆ ಬಂದಿರುವುದನ್ನು ತರುವುದು ಎಲ್ಲಾ ರಾಜ್ಯಗಳ ಜವಾಬ್ದಾರಿಯಾಗಿರುತ್ತದೆ. ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸುವುದು ತಪ್ಪಲ್ಲ, ಅದು ರಾಜಕೀಯ ಹೇಳಿಕೆಯಂತೆ. ನಮಗೆ ಅರ್ಥವಾಗುತ್ತದೆ. ಆದರೆ ನಾವು ಜಾರಿಗೆ ತರುವುದಿಲ್ಲ ಎಂದು ಹೇಳುವುದು ಕಾನೂನಿಗೆ ವಿರುದ್ಧ ಮತ್ತು ಅಸಂವಿಧಾನಿಕ ನಡೆ ಕೂಡ ಎಂದು ನಿರ್ಮಲಾ ಸೀತಾರಾಮನ್ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT