ಯುದ್ಧ ವಿಮಾನ 
ದೇಶ

ದಕ್ಷಿಣ ಭಾರತಕ್ಕೆ ಮೊದಲು: ತಂಜಾವೂರು ವಾಯುಪಡೆ ಕೇಂದ್ರಕ್ಕೆ ಸುಖೋಯ್-30 ಎಂಕೆಐ ಸೇರ್ಪಡೆ

ಭಾರತೀಯ ರಕ್ಷಣಾ ಸನ್ನದ್ಧತೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಕಾರ್ಯಾಚರಣೆ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸುಖೋಯ್ -30 ಯುದ್ಧ ವಿಮಾನವನ್ನು ಇಲ್ಲಿನ ವಾಯುಪಡೆ ಕೇಂದ್ರಕ್ಕೆ ಸೇರ್ಪಡೆಗೊಳಿಸಲಾಗಿದೆ.

ತಂಜಾವೂರು: ಭಾರತೀಯ ರಕ್ಷಣಾ ಸನ್ನದ್ಧತೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಕಾರ್ಯಾಚರಣೆ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸುಖೋಯ್ -30 ಯುದ್ಧ ವಿಮಾನವನ್ನು ಇಲ್ಲಿನ ವಾಯುಪಡೆ ಕೇಂದ್ರಕ್ಕೆ ಸೇರ್ಪಡೆಗೊಳಿಸಲಾಗಿದೆ.

ಬ್ರಹ್ಮೋಸ್ ಕ್ಷಿಪಣಿ ಒಳಗೊಂಡ ಸುಖೋಯ್-30 ಎಂಕೆಐ ಯುದ್ಧವಿಮಾನವನ್ನು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಳಿಸಲಾಯಿತು. ಕೊಯಮತ್ತೂರಿನ ಸೂಲೂರ್ ವಾಯುಪಡೆ ನೆಲೆಗೆ ಮುನ್ನೆಲೆಯ ಯುದ್ಧವಿಮಾನ ಈಗಾಗಲೇ ಸೇರ್ಪಡೆಗೊಂಡಿದ್ದು, ಇಂದು ಸೇರ್ಪಡೆಯಾದ ಯುದ್ಧವಿಮಾನ ದಕ್ಷಿಣ ಭಾರತದ ಮುನ್ನೆಲೆಯ ಎರಡನೇ ಯುದ್ಧವಿಮಾನವಾಗಿದೆ.

ತಂಜಾವೂರು, ದಕ್ಷಿಣ ವಾಯು ಕಮಾಂಡ್ ನ ಸುಖೋಯ್-30 ಯುದ್ಧವಿಮಾನವನ್ನು ಪಡೆದ ಮೊದಲ ಕೇಂದ್ರವೆನಿಸಿದೆ. 2013ರ ಮೇ 27ರಂದು ತಂಜಾವೂರು ವಾಯು ಪಡೆ ಕೇಂದ್ರವನ್ನು ಅಂದಿನ ರಕ್ಷಣಾ ಸಚಿವ ಎ.ಕೆ.ಆಂಟನಿ ರಾಷ್ಟ್ರಕ್ಕೆ ಸಮರ್ಪಿಸಿದ್ದರು. 

ಹಿಂದೂ ಮಹಾಸಾಗರ ಪ್ರದೇಶದ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಆರ್ಥಿಕ ಹಿತಾಸಕ್ತಿ ಮತ್ತು ಆಸ್ತಿಗಳನ್ನು ರಕ್ಷಿಸುವುದಕ್ಕಾಗಿ ಈ ಕೇಂದ್ರ ಸ್ಥಾಪಿಸಲಾಗಿದೆ. ತಂಜಾವೂರು ಮತ್ತು ಕೊಯಮತ್ತೂರು ಕೇಂದ್ರಗಳ ಸ್ಥಾಪನೆಗಳಿಂದ ದಕ್ಷಿಣ ಭಾಗದಲ್ಲಿ ಭಾರತೀಯ ವಾಯುಪಡೆಯ ಕಾರ್ಯಾಚರಣೆ ಸಾಮಥ್ರ್ಯ ಗಣನೀಯವಾಗಿ ವೃದ್ಧಿಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT