ಚಂದ್ರಶೇಖರ್ ಆಜಾದ್ 
ದೇಶ

ಆಜಾದ್ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್, ಚುನಾವಣೆ, ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿ ಭೇಟಿಗೆ ಅಸ್ತು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್....

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ ಮತ್ತು ಚುನಾವಣಾ ಉದ್ದೇಶಕ್ಕಾಗಿ ದೆಹಲಿ ಭೇಟಿಗೆ ಮಂಗಳವಾರ ಅನುಮತಿ ನೀಡಿದೆ.

ಡಿಸೆಂಬರ್ 20ರಂದು ದರ್ಯಾಗಂಜ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಅದರಲ್ಲಿ ನಾಲ್ಕು ವಾರಗಳ ಕಾಲ ದೆಹಲಿಗೆ ಭೇಟಿ ನೀಡದಂತೆ ಷರತ್ತು ವಿಧಿಸಲಾಗಿತ್ತು. 

ದೆಹಲಿ ಭೇಟಿಗೆ ಅನುಮತಿ ಕೋರಿ ಆಜಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಕಾಮಿನಿ ಲಾವೊ ಅವರು, ಜಾಮೀನು ಆದೇಶವನ್ನು ಮಾರ್ಪಡಿಸಿ, ದೆಹಲಿ ಭೇಟಿಗೆ ಅನುಮತಿ ನೀಡಿದ್ದಾರೆ.

ಆಜಾದ್ ಸಂಘಟನೆ ಕಳೆದ ಡಿಸೆಂಬರ್ 20ರಂದು ಪೊಲೀಸರ ಅನುಮತಿ ಪಡೆಯದೆ ಸಿಎಎ ವಿರುದ್ಧ ಜಾಮಾ ಮಸೀದಿಯಿಂದ ಜಂತರ್ ಮಂತರ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT