ಚಂದ್ರಶೇಖರ್ ಆಜಾದ್ 
ದೇಶ

ಆಜಾದ್ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್, ಚುನಾವಣೆ, ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿ ಭೇಟಿಗೆ ಅಸ್ತು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್....

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ ಮತ್ತು ಚುನಾವಣಾ ಉದ್ದೇಶಕ್ಕಾಗಿ ದೆಹಲಿ ಭೇಟಿಗೆ ಮಂಗಳವಾರ ಅನುಮತಿ ನೀಡಿದೆ.

ಡಿಸೆಂಬರ್ 20ರಂದು ದರ್ಯಾಗಂಜ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಅದರಲ್ಲಿ ನಾಲ್ಕು ವಾರಗಳ ಕಾಲ ದೆಹಲಿಗೆ ಭೇಟಿ ನೀಡದಂತೆ ಷರತ್ತು ವಿಧಿಸಲಾಗಿತ್ತು. 

ದೆಹಲಿ ಭೇಟಿಗೆ ಅನುಮತಿ ಕೋರಿ ಆಜಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಕಾಮಿನಿ ಲಾವೊ ಅವರು, ಜಾಮೀನು ಆದೇಶವನ್ನು ಮಾರ್ಪಡಿಸಿ, ದೆಹಲಿ ಭೇಟಿಗೆ ಅನುಮತಿ ನೀಡಿದ್ದಾರೆ.

ಆಜಾದ್ ಸಂಘಟನೆ ಕಳೆದ ಡಿಸೆಂಬರ್ 20ರಂದು ಪೊಲೀಸರ ಅನುಮತಿ ಪಡೆಯದೆ ಸಿಎಎ ವಿರುದ್ಧ ಜಾಮಾ ಮಸೀದಿಯಿಂದ ಜಂತರ್ ಮಂತರ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?