ದೆಹಲಿ ಚುನಾವಣೆ: ಕೇಜ್ರಿವಾಲ್ ವಿರುದ್ಧ ಸ್ಪರ್ಧೆಗಿಳಿದ ಕನ್ನಡಿಗ ವೆಂಕಟೇಶ್ವರ ಸ್ವಾಮಿ 
ದೇಶ

ದೆಹಲಿ ಚುನಾವಣೆ: ಕೇಜ್ರಿವಾಲ್ ವಿರುದ್ಧ ಸ್ಪರ್ಧೆಗಿಳಿದ ಕನ್ನಡಿಗ ವೆಂಕಟೇಶ್ವರ ಸ್ವಾಮಿ

ದೆಹಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕನ್ನಡಿಗ ವೆಂಕಟೇಶ್ವರ ಸ್ವಾಮೀಜಿಗಳು ಸ್ಪರ್ಧೆಗಿಳಿದಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕನ್ನಡಿಗ ವೆಂಕಟೇಶ್ವರ ಸ್ವಾಮೀಜಿಗಳು ಸ್ಪರ್ಧೆಗಿಳಿದಿದ್ದಾರೆ. 

ಪಕ್ಷೇತರ ಅಭ್ಯರ್ಥಿಯಾಗಿ ವೆಂಕಟೇಶ್ವರ ಸ್ವಾಮೀಜಿಗಳು ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದಿದ್ದಾರೆಂದು ತಿಳಿದುಬಂದಿದೆ. 

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲಾ ಗ್ರಾಮದವರಾಗಿರುವ ವೆಂಕಟೇಶ್ವರ ಮಹಾ ಸ್ವಾಮೀಜಿ ಕಾಂಗ್ರೆಸ್, ಬಿಜೆಪಿ, ಎನ್'ಸಿಪಿಯಿಂದ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದರು. ಇದೀಗ ಜನವರಿ 14 ರಂದು ಪಕ್ಷೇತ್ರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ. 

ವೆಂಕಟೇಶ್ವರ ಸ್ವಾಮೀಜಿಗಳ ಬಳಿ ರೂ.9 ನಗದಿದ್ದು, ರೂ.99,999 ಸಾಲವಿದೆ ಎಂದು ಚುನಾವಣಾ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ. ಅವರು ಈ ಹಿಂದೆಯೂ ಕರ್ನಾಟಕ, ಗುಜರಾತ್, ಉತ್ತರಪ್ರದೇಶ, ಮಹಾರಾಷ್ಟ್ರ ಗೋವಾಗಳಲ್ಲಿ ಗ್ರಾಮ ಪಂಚಾಯಿತಿಯಿದಂ ಹಿಡಿದು ಲೋಕಸಭೆಯವರೆಗೂ ಒಟ್ಟು 18 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಇವರ ಪೂರ್ವಾಶ್ರಮದ ಹೆಸರು ದೀಪಕ್ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT