ಸಂಗ್ರಹ ಚಿತ್ರ 
ದೇಶ

ನಿತ್ಯಾನಂದ ಸ್ವಾಮಿಗೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ

ದೇಶ ಬಿಟ್ಟು 'ಕೈಲಾಸ'ಕ್ಕೆ ಪರಾರಿಯಾಗಿರುವ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ದೇಶ ಬಿಟ್ಟು 'ಕೈಲಾಸ'ಕ್ಕೆ ಪರಾರಿಯಾಗಿರುವ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಗುಜರಾತ್​ನ ಅಹಮದಾಬಾದ್​ ನಲ್ಲಿರುವ ಯೋಗಿನಿ ಸರ್ವಜ್ಞ ಪೀಠಂ ಆಶ್ರಮದಲ್ಲಿನ ನಾಲ್ಕು ವಿದ್ಯಾರ್ಥಿಗಳ ಅಪಹರಣ ಹಾಗೂ ಅವರನ್ನು ಆಶ್ರಮಕ್ಕೆ ದೇಣಿಗೆ ಸಂಗ್ರಹಿಸಲು ಬಳಸಿಕೊಂಡ ಆರೋಪದ ಮೇಲೆ ನಿತ್ಯಾನಂದ ವಿರುದ್ಧ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಇದೇ ವಿಚಾರವಾಗಿ ಗುಜರಾತ್ ಪೊಲೀಸರು ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದ್ದರು. 

ಗುಜರಾತ್ ಪೊಲೀಸರ ಮನವಿಯಂತೆ ಇದೀಗ ಇಂಟರ್ ಪೋಲ್ ನಿತ್ಯಾನಂದ ಸ್ವಾಮಿಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಸಾಮಾನ್ಯವಾಗಿ ಈ ಬ್ಲೂ ಕಾರ್ನರ್ ನೋಟಿಸ್ ಅನ್ನು ನಾಪತ್ತೆಯಾದ, ಗುರುತು ಪತ್ತೆಯಾದ ಅಥವಾ ಪತ್ತೆಯಾಗದ ಅಪರಾಧಿಗಳು ಮತ್ತು ಸಾಮಾನ್ಯ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿರುವ ಅಪರಾಧಿಗಳ ವಿರುದ್ಧ ಹೊರಡಿಸಲಾಗುತ್ತದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಹ್ಮದಾಬಾದ್ ಪೊಲೀಸರು, ನಿತ್ಯಾನಂದ ಸ್ವಾಮಿ ಬೆಂಗಳೂರಿಗೆ ಬಾರದೆ ಅನೇಕ ವರ್ಷಗಳಾಗಿವೆ. ಆತನ ಮೇಲೆ ರಂಜಿತಾ ಸೇರಿದಂತೆ ಇನ್ನೂ ಕೆಲವು ಶಿಷ್ಯರು ಅತ್ಯಾಚಾರದ ಆರೋಪ ಮಾಡಿದ ನಂತರ ದೇಶ ಬಿಟ್ಟು ಹೋಗಿದ್ದಾರೆ. ಅವರನ್ನು ಭಾರತದಲ್ಲಿ ಹುಡುಕುವುದು ವ್ಯರ್ಥ. ಮುಂದಿನ ದಿನಗಳಲ್ಲಿ ಇಂಟರ್ ಪೋಲ್ ಗೆ ಈ ಕುರಿತು ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT