ಪಬ್ ಜಿ ವ್ಯಸನ ಪರಿಣಾಮ: ಮನೆ, ಕಾರುಗಳಿಗೆ ಕಲ್ಲು ತೂರುತ್ತಿದ್ದ ಯುವಕ ಈಗ ಪೊಲೀಸ್ ವಶದಲ್ಲಿ! 
ದೇಶ

ಪಬ್ ಜಿ ವ್ಯಸನ ಪರಿಣಾಮ: ಮನೆ, ಕಾರುಗಳಿಗೆ ಕಲ್ಲು ತೂರುತ್ತಿದ್ದ ಯುವಕ ಈಗ ಪೊಲೀಸ್ ವಶದಲ್ಲಿ! 

ಪಬ್ ಜಿ  ವ್ಯಸನಕ್ಕೆ ತುತ್ತಾಗಿದ್ದ ಯುವಕನೋರ್ವನನ್ನು ಪೊಲೀಸರು ಕೈ ಕಟ್ಟಿ ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 

ವಿಜಯಪುರ: ಪಬ್ ಜಿ  ವ್ಯಸನಕ್ಕೆ ತುತ್ತಾಗಿದ್ದ ಯುವಕನೋರ್ವನನ್ನು ಪೊಲೀಸರು ಕೈ ಕಟ್ಟಿ ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 

ವಿಜಯಪುರದ ಲಕ್ಷ್ಮಿನಗರದ ನಿವಾಸಿ ಮಲ್ಲಿಕಾರ್ಜುನ ಚಂದ್ರಕಾಂತ್ ಬಂಧಿತ ಯುವಕ. ಈತ ಅರೆ ನಗ್ನ ಸ್ಥಿತಿಯಲ್ಲಿ ಮನೆ, ಕಾರುಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನ ಕೈಗಳನ್ನು ಕಟ್ಟಿ ವೈದ್ಯಕೀಯ ನೆರವಿಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 

ಪ್ರತ್ಯಕ್ಷ ಸಾಕ್ಷಿಗಳ ಪ್ರಕಾರ ಈ ಯುವಕ ಪಬ್ ಜಿ ಗೇಮ್ ನ ಗೀಳು ಹತ್ತಿಸಿಕೊಂಡಿದ್ದ ಇದರಿಂದಲೇ ಪ್ರೇರಣೆಗೊಂಡು ಕಾರು, ಮನೆಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ. ಪಬ್ ಜಿ ಗೇಮ್ ನಲ್ಲಿ ಎದುರಾಳಿಗಳತ್ತ ಸೇಬು ಹಣ್ನು ಎಸೆಯುವುದು ಇದೆ. ಆದರೆ ಕಲ್ಲಿನಿಂದ ಹೊಡೆಯುವುದು ಇಲ್ಲ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. 

ಈ ಯುವಕನ ಪಬ್ ಜಿ ಗೀಳಿನಿಂದ ಒಂದಷ್ಟು ಮನೆ, ಕಾರುಗಳಿಗೆ ಹಾನಿ ಉಂಟಾಗಿದೆ. ಆತ ಪಬ್ ಜಿ ಗೇಮ್ ವ್ಯಸನಕ್ಕೆ ಒಳಗಾಗಿದ್ದ ಕಾರಣ ಯಾವ ಪ್ರಕರಣವನ್ನೂ ದಾಖಲಿಸಲಾಗಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳಿಯರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT