ಪಬ್ ಜಿ ವ್ಯಸನ ಪರಿಣಾಮ: ಮನೆ, ಕಾರುಗಳಿಗೆ ಕಲ್ಲು ತೂರುತ್ತಿದ್ದ ಯುವಕ ಈಗ ಪೊಲೀಸ್ ವಶದಲ್ಲಿ! 
ದೇಶ

ಪಬ್ ಜಿ ವ್ಯಸನ ಪರಿಣಾಮ: ಮನೆ, ಕಾರುಗಳಿಗೆ ಕಲ್ಲು ತೂರುತ್ತಿದ್ದ ಯುವಕ ಈಗ ಪೊಲೀಸ್ ವಶದಲ್ಲಿ! 

ಪಬ್ ಜಿ  ವ್ಯಸನಕ್ಕೆ ತುತ್ತಾಗಿದ್ದ ಯುವಕನೋರ್ವನನ್ನು ಪೊಲೀಸರು ಕೈ ಕಟ್ಟಿ ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 

ವಿಜಯಪುರ: ಪಬ್ ಜಿ  ವ್ಯಸನಕ್ಕೆ ತುತ್ತಾಗಿದ್ದ ಯುವಕನೋರ್ವನನ್ನು ಪೊಲೀಸರು ಕೈ ಕಟ್ಟಿ ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 

ವಿಜಯಪುರದ ಲಕ್ಷ್ಮಿನಗರದ ನಿವಾಸಿ ಮಲ್ಲಿಕಾರ್ಜುನ ಚಂದ್ರಕಾಂತ್ ಬಂಧಿತ ಯುವಕ. ಈತ ಅರೆ ನಗ್ನ ಸ್ಥಿತಿಯಲ್ಲಿ ಮನೆ, ಕಾರುಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನ ಕೈಗಳನ್ನು ಕಟ್ಟಿ ವೈದ್ಯಕೀಯ ನೆರವಿಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 

ಪ್ರತ್ಯಕ್ಷ ಸಾಕ್ಷಿಗಳ ಪ್ರಕಾರ ಈ ಯುವಕ ಪಬ್ ಜಿ ಗೇಮ್ ನ ಗೀಳು ಹತ್ತಿಸಿಕೊಂಡಿದ್ದ ಇದರಿಂದಲೇ ಪ್ರೇರಣೆಗೊಂಡು ಕಾರು, ಮನೆಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ. ಪಬ್ ಜಿ ಗೇಮ್ ನಲ್ಲಿ ಎದುರಾಳಿಗಳತ್ತ ಸೇಬು ಹಣ್ನು ಎಸೆಯುವುದು ಇದೆ. ಆದರೆ ಕಲ್ಲಿನಿಂದ ಹೊಡೆಯುವುದು ಇಲ್ಲ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. 

ಈ ಯುವಕನ ಪಬ್ ಜಿ ಗೀಳಿನಿಂದ ಒಂದಷ್ಟು ಮನೆ, ಕಾರುಗಳಿಗೆ ಹಾನಿ ಉಂಟಾಗಿದೆ. ಆತ ಪಬ್ ಜಿ ಗೇಮ್ ವ್ಯಸನಕ್ಕೆ ಒಳಗಾಗಿದ್ದ ಕಾರಣ ಯಾವ ಪ್ರಕರಣವನ್ನೂ ದಾಖಲಿಸಲಾಗಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳಿಯರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel