ದೇವೀಂದರ್ ಸಿಂಗ್ 
ದೇಶ

ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ

ಭಯೋತ್ಪಾದನೆ ಚಟುವಟಿಕೆಗಳಲ್ಲಿ ಮಾಜಿ ಪೊಲೀಸ್ ಅಧಿಕಾರಿ ದೇವೀಂದರ್ ಸಿಂಗ್ ಪಾತ್ರದ ಬಗ್ಗೆ ತನಿಖೆ ಮುಂದುವರೆದಿದ್ದು, ಈ ನಡುವಲ್ಲೇ ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.

ಶ್ರೀನಗರ: ಭಯೋತ್ಪಾದನೆ ಚಟುವಟಿಕೆಗಳಲ್ಲಿ ಮಾಜಿ ಪೊಲೀಸ್ ಅಧಿಕಾರಿ ದೇವೀಂದರ್ ಸಿಂಗ್ ಪಾತ್ರದ ಬಗ್ಗೆ ತನಿಖೆ ಮುಂದುವರೆದಿದ್ದು, ಈ ನಡುವಲ್ಲೇ ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ. 

ಉಗ್ರರೊಂದಿಗೆ ಕಾರಿನಲ್ಲಿ ಪ್ರಯಾಣ ನಡೆಸುತ್ತಿದ್ದ ಸಂದರ್ಭದಲ್ಲಿ ದೇವೀಂದರ್ ಸಿಂಗ್ ಅವರು ಸಿಕ್ಕಿಬಿದ್ದಿದ್ದರು. ದೇವೀಂದರ್ ಸಿಂಗ್ ಬಂಧನದ ಬಳಿಕ ಇದೀಗ ಶ್ರೀನಗರದ ಇಂದಿರಾನಗರದಲ್ಲಿರುವ ಅವರ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ. 

ದೇವೀಂದರ್ ಸಿಂಗ್ ಅವರು ಉಗ್ರರೊಂದಿಗಿ ಸಿಕ್ಕಿಬಿದ್ದ ಬಳಿಕ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯು ಸಿಂಗ್ ಅವರನ್ನು ವಜಾಗೊಳಿಸಿತ್ತು. ಬಳಿಕ 2018ರಲ್ಲಿ ನೀಡಲಾಗಿದ್ದ ಶೌರ್ಯ ಪ್ರಶಸ್ತಿಯನ್ನು ಹಿಂಪಡೆದುಕೊಂಡಿತ್ತು. 

ಇದೀಗ ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ತಂಡ ಪರಿಶೀಲನೆ ನಡೆಸುತ್ತಿದೆ. ದಾಳಿ ಬಳಿಕ ಕೆಲ ಅಧಿಕಾರಿಗಳು ರಾಜಧಾನಿ ದೆಹಲಿಗೆ ಹಿಂತಿರುಗಿದ್ದು, ಐವರು ಸದಸ್ಯರ ಅಧಿಕಾರಿಗಳ ತಂಡ ಇನ್ನೂ ಅಲ್ಲಿಯೇ ಉಳಿದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT