ಸಾಂದರ್ಭಿಕ ಚಿತ್ರ 
ದೇಶ

ಪುಲ್ವಾಮದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ, ಎರಡನೇ ದಿನ ಓರ್ವ ಉಗ್ರನ ಹತ್ಯೆ

ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರ: ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ 12ಕ್ಕೆ ಖ್ರೆವ್ ನ ಜಂತರಾಗ್ ಗ್ರಾಮದಲ್ಲಿ ಶುರುವಾದ ಗುಂಡಿನ ಚಕಮಕಿಯಲ್ಲಿ ಇದುವರೆಗೆ ಸೈನಿಕನೋರ್ವ ಮತ್ತು ಜಮ್ಮು-ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡದ ಓರ್ವ ಯೋಧ ಹತಾತ್ಮರಾಗಿದ್ದಾರೆ. 

ಜಂತರಾಗ್ ಗೆ 2 ಕಿ.ಮೀ ದೂರದ ನಗ್ರಟನ್ ಗ್ರಾಮದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಈ ಪ್ರದೇಶವನ್ನು ಸುತ್ತುವರೆದಿರುವ ಭದ್ರತಾ ಪಡೆಗಳು ಇತ್ತೀಚಿನ ವರದಿ ಬರುವವರೆಗೆ ಕಾರ್ಯಾಚರಣೆ ಮುಂದುವರೆಸಿವೆ. 

ಕತ್ತಲಾದ್ದರಿಂದ ನಿನ್ನೆ ತಡರಾತ್ರಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಆದರೂ ಉಗ್ರರು ಪರಾರಿಯಾಗುವುದನ್ನು ತಡೆಯಲು ಕೊರೆಯುವ ಚಳಿಯಲ್ಲೂ ಭದ್ರತಾಪಡೆಗಳನ್ನು ಅದೇ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. 

ಬೆಳಿಗ್ಗೆ ಬೆಳಕು ಹರಿಯುತ್ತಿದ್ದಂತೆ ಭದ್ರತಾ ಪಡೆಗಳು ಹತ್ತಿರದ ಅರಣ್ಯ ಸೇರಿದಂತೆ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ.  

ಜಂತರಗ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ನಿರ್ದಿಷ್ಟ ಮಾಹಿತಿ ಆಧರಿಸಿ ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ದಚಿಗಾಮ್ ಮತ್ತು ತ್ರಾಲ್ ಅರಣ್ಯಗಳನ್ನು ಒಳಗೊಂಡ ಖ್ರೆವ್ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT