ಸಾಂದರ್ಭಿಕ ಚಿತ್ರ 
ದೇಶ

ಪುಲ್ವಾಮದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ, ಎರಡನೇ ದಿನ ಓರ್ವ ಉಗ್ರನ ಹತ್ಯೆ

ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರ: ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ 12ಕ್ಕೆ ಖ್ರೆವ್ ನ ಜಂತರಾಗ್ ಗ್ರಾಮದಲ್ಲಿ ಶುರುವಾದ ಗುಂಡಿನ ಚಕಮಕಿಯಲ್ಲಿ ಇದುವರೆಗೆ ಸೈನಿಕನೋರ್ವ ಮತ್ತು ಜಮ್ಮು-ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡದ ಓರ್ವ ಯೋಧ ಹತಾತ್ಮರಾಗಿದ್ದಾರೆ. 

ಜಂತರಾಗ್ ಗೆ 2 ಕಿ.ಮೀ ದೂರದ ನಗ್ರಟನ್ ಗ್ರಾಮದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಈ ಪ್ರದೇಶವನ್ನು ಸುತ್ತುವರೆದಿರುವ ಭದ್ರತಾ ಪಡೆಗಳು ಇತ್ತೀಚಿನ ವರದಿ ಬರುವವರೆಗೆ ಕಾರ್ಯಾಚರಣೆ ಮುಂದುವರೆಸಿವೆ. 

ಕತ್ತಲಾದ್ದರಿಂದ ನಿನ್ನೆ ತಡರಾತ್ರಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಆದರೂ ಉಗ್ರರು ಪರಾರಿಯಾಗುವುದನ್ನು ತಡೆಯಲು ಕೊರೆಯುವ ಚಳಿಯಲ್ಲೂ ಭದ್ರತಾಪಡೆಗಳನ್ನು ಅದೇ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. 

ಬೆಳಿಗ್ಗೆ ಬೆಳಕು ಹರಿಯುತ್ತಿದ್ದಂತೆ ಭದ್ರತಾ ಪಡೆಗಳು ಹತ್ತಿರದ ಅರಣ್ಯ ಸೇರಿದಂತೆ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ.  

ಜಂತರಗ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ನಿರ್ದಿಷ್ಟ ಮಾಹಿತಿ ಆಧರಿಸಿ ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ದಚಿಗಾಮ್ ಮತ್ತು ತ್ರಾಲ್ ಅರಣ್ಯಗಳನ್ನು ಒಳಗೊಂಡ ಖ್ರೆವ್ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT