ಸಿಎಎ ವಿರೋಧಿ ನಿರ್ಣಯ ರಾಜಕೀಯ ನಡೆಯಷ್ಟೇ, ರಾಜ್ಯಗಳ ಪಾತ್ರಕ್ಕೆ ಮಹತ್ವ ಇಲ್ಲ: ಶಶಿ ತರೂರ್ 
ದೇಶ

ಸಿಎಎ ವಿರೋಧಿ ನಿರ್ಣಯ ರಾಜಕೀಯ ನಡೆಯಷ್ಟೇ, ರಾಜ್ಯಗಳ ಪಾತ್ರಕ್ಕೆ ಮಹತ್ವ ಇಲ್ಲ: ಶಶಿ ತರೂರ್ 

ಸಿಎಎ ವಿರೋಧಿ ನಿರ್ಣಯಗಳು ರಾಜಕೀಯ ನಡೆಯಷ್ಟೇ, ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಹೆಚ್ಚಿನ ಪಾತ್ರ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. 

ಕೋಲ್ಕತ್ತಾ: ಸಿಎಎ ವಿರೋಧಿ ನಿರ್ಣಯಗಳು ರಾಜಕೀಯ ನಡೆಯಷ್ಟೇ, ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಹೆಚ್ಚಿನ ಪಾತ್ರ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. 

ಕಪಿಲ್ ಸಿಬಲ್ ನಂತರ ಕಾಂಗ್ರೆಸ್ ನ ಮತ್ತೋರ್ವ ನಾಯಕ ಶಶಿ ತರೂರ್ ಸಿಎಎ ವಿರೋಧಿ ನಿರ್ಣಯಗಳನ್ನು ರಾಜ್ಯ ಸರ್ಕಾರಗಳು ತೆಗೆದುಕೊಳ್ಳುವಂತಿಲ್ಲ ಎಂಬ ಧ್ವನಿಯಲ್ಲಿ ಮಾತನಾಡಿದ್ದಾರೆ. 

ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಶಶಿ ತರೂರ್ ಮಾತನಾಡಿದ್ದು, ಪೌರತ್ವ ನೀಡುವ ವಿಷಯದಲ್ಲಿ ರಾಜ್ಯಗಳ ಪಾತ್ರಕ್ಕೆ ಮಹತ್ವವಿಲ್ಲ. ಆದರೆ ಎನ್ ಆರ್ ಸಿ ಹಾಗೂ ಎನ್ ಪಿ ಆರ್ ವಿಷಯದಲ್ಲಿ ರಾಜ್ಯಗಳಿಗೆ ಅಧಿಕಾರವಿದ್ದು, ರಾಜ್ಯ ಸರ್ಕಾರಗಳ ನಿರ್ಧಾರ ನಿರ್ಣಾಯಕವಾಗಿರಲಿದೆ ಎಂದು ತರೂರ್ ಹೇಳಿದ್ದಾರೆ.

ಎನ್ ಪಿಆರ್, ಎನ್ ಆರ್ ಸಿ ಗಾಗಿ ರಾಜ್ಯಗಳ ಮಾನವಸಂಪನ್ಮೂಲ ಬಳಕೆಯಾಗಲಿವೆ. ಕೇಂದ್ರ ಸರ್ಕಾರದ ಬಳಿ ಅಗತ್ಯವಿರುವಷ್ಟು ಮಾನವ ಸಂಪನ್ಮೂಲ ಇಲ್ಲ. ಈ ಕಾರಣದಿಂದ ರಾಜ್ಯಸರ್ಕಾರಗಳ ನಿರ್ಧಾರ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಶಶಿ ತರೂರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT