ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 
ದೇಶ

ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ರಾಜಸ್ಥಾನ

ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ರಾಜಸ್ಥಾನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ.

ಜೈಪುರ್: ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ರಾಜಸ್ಥಾನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ. ಈ ಮೂಲಕ ಪಂಜಾಬ್ ಹಾಗೂ ಕೇರಳ ನಂತರ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಮೂರನೇ ರಾಜ್ಯವಾಗಿದೆ.

ಇಂದು ಬೆಳಗ್ಗೆ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ದಾರಿವಾಲ್ ಅವರು ಸದನದಲ್ಲಿ ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತು. ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬಿಸಿ ಬಿಸಿ ಚರ್ಚೆಯ ಬಳಿಕ ನಿರ್ಣಯವನ್ನು ಮತಕ್ಕೆ ಹಾಕಲಾಯಿತು. ಬಳಿಕ ಧ್ವನಿಮತದ ಮೂಲಕ ಸಿಎಎ ವಾಪಸ್ ಪಡೆಯುವಂತೆ ನಿರ್ಣಯ ಅಂಗೀಕರಿಸಲಾಯಿತು.

ಈವರೆಗೂ ಕೇರಳ ಹಾಗೂ ಪಂಜಾಬ್ ವಿಧಾನಸಭೆಯಲ್ಲಿ ಸಿಎಎ ಕುರಿತ ನಿರ್ಣಯವನ್ನು ಮಾತ್ರ ಅಂಗೀಕರಿಸಲಾಗಿದೆ. ಸಿಎಎ ಸಂವಿಧಾನದ ಮೂಲವನ್ನೇ ಉಲ್ಲಂಘಿಸಿದೆ. ಇದರಿಂದ ದೇಶದ ಅಪಾರ ಸಂಖ್ಯೆಯ ಜನರು ಭೀತಿಗೊಳಗಾಗಿದ್ದಾರೆ. ಎನ್ ಪಿಆರ್ ಹಾಗೂ ಎನ್ ಆರ್ ಸಿ ಪ್ರಸ್ತಾವನೆಯೂ ಇದೇ ಆಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಎನ್‌ಪಿಆರ್‌ನ ಹೊಸ ನಿಬಂಧನೆಗಳನ್ನು ಹಿಂತೆಗೆದುಕೊಂಡ ನಂತರವೇ ಜನಗಣತಿ ಕಾರ್ಯಗಳನ್ನು ಮಾಡಬೇಕು.ಪೌರತ್ವ ತಿದ್ದುಪಡಿ ಕಾಯ್ದೆಯ ಇತ್ತೀಚಿನ ತಿದ್ದುಪಡಿಗಳು ಜನರನ್ನು ಧಾರ್ಮಿಕ ಆಧಾರದ ಮೇಲೆ ಪ್ರತ್ಯೇಕಿಸುತ್ತವೆ. ಭಾರತದ ಒಂದು ಭಾಗದ ವ್ಯಕ್ತಿಗಳಿಗೆ ಪೌರತ್ವವನ್ನು ಕಸಿದುಕೊಳ್ಳಲು ಇದನ್ನು  ರೂಪಿಸಲಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?