ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ವೈರಸ್ ಭೀತಿ: ಏಳಕ್ಕೂ ಹೆಚ್ಚು ಜನರು ಅಬ್ಸರ್ವೆಷನಲ್ಲಿದ್ದಾರೆ- ಕೇಂದ್ರ ಸರ್ಕಾರ

ಕೊರೋನಾ ವೈರಸ್ ಭೀತಿ  ಹಿನ್ನೆಲೆಯಲ್ಲಿ  ಚೀನಾದಿಂದ ಆಗಮಿಸಿದ ಏಳಕ್ಕೂ ಹೆಚ್ಚು ಜನರನ್ನು ವೈದ್ಯಕೀಯ ಅಬ್ಸರ್ವೆಷನಲ್ಲಿ ಇರಿಸಲಾಗಿದೆ. ಆದಾಗ್ಯೂ, ದೇಶದಲ್ಲಿ ಕೊರೋನಾ ವೈರಸ್  ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇಂದು ತಿಳಿಸಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ಭೀತಿ  ಹಿನ್ನೆಲೆಯಲ್ಲಿ  ಚೀನಾದಿಂದ ಆಗಮಿಸಿದ ಏಳಕ್ಕೂ ಹೆಚ್ಚು ಜನರನ್ನು ವೈದ್ಯಕೀಯ ಅಬ್ಸರ್ವೆಷನಲ್ಲಿ ಇರಿಸಲಾಗಿದೆ. ಆದಾಗ್ಯೂ, ದೇಶದಲ್ಲಿ ಕೊರೋನಾ ವೈರಸ್  ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇಂದು ತಿಳಿಸಿದ್ದಾರೆ.

ಈ ಏಳು  ಪ್ರಯಾಣಿಕರ ರಕ್ತದ ಮಾದರಿಯನ್ನು ಪುಣೆಯ ಐಸಿಎಂಆರ್- ನೀವ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ, ಕೊಲ್ಕತ್ತಾ, ಮುಂಬೈ, ಚೆನ್ನೈ, ಬೆಂಗಳೂರು, ಹೈದ್ರಾಬಾದ್ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಿಗೆ ಬಹು ಶಿಸ್ತಿನ ಕೇಂದ್ರ ತಂಡವನ್ನು ಕಳುಹಿಸಲು ಕೇಂದ್ರ ಆರೋಗ್ಯ ಸಚಿವರು ನಿರ್ದೇಶನ ನೀಡಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್  ಕುರಿತ ಮುನ್ನೆಚ್ಚರಿಕಾ ಹಾಗೂ ನಿರ್ವಹಣಾ ಕುರಿತು  ಪರಿಶೀಲನಾ ಸಭೆ ನಡೆಸಿದ ಹರ್ಷವರ್ಧನ್,  ನೇಪಾಳದಲ್ಲಿ ಪ್ರಕರಣವೊಂದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ನೆರವು ನೀಡುವುದಾಗಿ ಉತ್ತರ್ ಖಂಡ್ ಮುಖ್ಯಮಂತ್ರಿಗಳಿಗೆ  ಭರವಸೆ ನೀಡಿದ್ದಾರೆ.

ಚೀನಾದಿಂದ ಇತ್ತೀಚಿಗೆ ಆಗಮಿಸಿದ ಕೇರಳದ ಏಳು, ಮುಂಬೈನ ಇಬ್ಬರು, ಬೆಂಗಳೂರು ಹಾಗೂ ಹೈದ್ರಾಬಾದಿನ ತಲಾ ಒಬ್ಬರು ಪ್ರಯಾಣಿಕರನ್ನು ಕೊರೋನಾ ವೈರಸ್ ಭೀತಿ  ಹಿನ್ನೆಲೆಯಲ್ಲಿ ವೈದ್ಯಕೀಯ ಅಬ್ಸರ್ವೆಷನಲ್ಲಿ ಇರಿಸಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT