ಶಶಿ ತರೂರ್ 
ದೇಶ

ಹೀಗಾದರೆ ಪಾಕಿಸ್ತಾನ ಪಿತಾಮಹ ಜಿನ್ನಾ ಅವರ ಲುವು ಸಂಪೂರ್ಣವಾದಂತೆ-ಶಶಿ ತರೂರ್ ಹೇಳಿದ್ದಿಷ್ಟು

ಪೌರತ್ವ (ತಿದ್ದುಪಡಿ) ಕಾಯ್ದೆಯು ರಾಷ್ಟ್ರೀಯ ನಾಗರಿಕರ ನೋಂದಣಿಗೆ (ಎನ್‌ಆರ್‌ಸಿ) ಕಾರಣವಾದರೆ ಪಾಕಿಸ್ತಾನದ ಪಿತಾಮಹ ಮುಹಮ್ಮದ್ ಅಲಿ ಜಿನ್ನಾ ಅವರ ಗೆಲುವಿನ ಉದ್ದೇಶ ಪೂರ್ಣವಾಗಲಿದೆ  ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ. ಅವರೆಲ್ಲಾ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ವಿಫಲವಾಗಿದ್ದಾದರೆ ಹೆಚ್ಚಿನ ಸಂಖ್ಯೆಯಜನರು  ತನ್ನ ಹಕ್ಕುಗಳಿಂದ ವಂಚಿತರಾಗುವ

ಜೈಪುರ್: ಪೌರತ್ವ (ತಿದ್ದುಪಡಿ) ಕಾಯ್ದೆಯು ರಾಷ್ಟ್ರೀಯ ನಾಗರಿಕರ ನೋಂದಣಿಗೆ (ಎನ್‌ಆರ್‌ಸಿ) ಕಾರಣವಾದರೆ ಪಾಕಿಸ್ತಾನದ ಪಿತಾಮಹ ಮುಹಮ್ಮದ್ ಅಲಿ ಜಿನ್ನಾ ಅವರ ಗೆಲುವಿನ ಉದ್ದೇಶ ಪೂರ್ಣವಾಗಲಿದೆ  ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ. ಅವರೆಲ್ಲಾ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ವಿಫಲವಾಗಿದ್ದಾದರೆ ಹೆಚ್ಚಿನ ಸಂಖ್ಯೆಯಜನರು  ತನ್ನ ಹಕ್ಕುಗಳಿಂದ ವಂಚಿತರಾಗುವರು ಎಂದು ಅವರು ಹೇಳಿದ್ದಾರೆ

ಜೈಪುರ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ತರೂರ್  'ಸಿಎಎ ಅನುಷ್ಠಾನವು ಜಿನ್ನಾ ಅವರ ಎರಡು ರಾಷ್ಟ್ರಗಳ ಸಿದ್ಧಾಂತದ ನೆರವೇರಿಕೆ' ಎಂದು ಹೇಳಿದ್ದಾರೆ."ಜಿನ್ನಾ ಗೆದ್ದಿದ್ದಾರೆ ಎಂದು ನಾನು ಹೇಳುವುದಿಲ್ಲ ಆದರೆ ಅವರು ಗೆಲ್ಲುತ್ತಾರೆ"  ಎಂದರು.

"ಸಿಎಎ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗೆ ಕಾರಣವಾದರೆ ಇದು ಆಗಿಯೇ ಆಗುತ್ತದೆ.ಹಾಗೆ ಆದಲ್ಲಿ , ಜಿನ್ನಾ ಅವರ ಗೆಲುವು ಪೂರ್ಣಗೊಂಡಿದೆ ಎಂದು ನೀವು ಹೇಳಬಹುದು. ಜಿನ್ನಾ ಎಲ್ಲಿದ್ದರೂ, ಮುಸ್ಲಿಮರು ಪ್ರತ್ಯೇಕ ದೇಶಕ್ಕೆ ಅರ್ಹರು ಎಂದು ಅವರು ಹೇಳಿದ್ದರೆಂದು ಹೇಳಬಹುದು. ಆದರೆ ಹಿಂದೂಗಳು ಮುಸ್ಲಿಮರೊಂದಿಗೆ ಒಟ್ಟಿಗಿರಲು ಸಾಧ್ಯವಿಲ್ಲ"

ಜಿನ್ನಾ ದ್ವಿ ರಾಷ್ಟ್ರ ಸಿದ್ದಾಂತದ ಪ್ರಬಲ ಪ್ರತಿಪಾದಕರಾಗಿದ್ದು  ಹಿಂದೂಗಳು ಮತ್ತು ಮುಸ್ಲಿಮರು ಎರಡು ವಿಭಿನ್ನ ಧಾರ್ಮಿಕ ತತ್ತ್ವಚಿಂತನೆಗಳಿಗೆ ಸೇರಿದ ಎರಡು ಪ್ರತ್ಯೇಕ ಜನರು, ವಿಭಿನ್ನ ಸಾಮಾಜಿಕ ಪದ್ಧತಿಗಳು ಮತ್ತು ಸಾಹಿತ್ಯವನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಧಾರ್ಮಿಕ ಕಿರುಕುಳಕ್ಕೀಡಾಗಿ ಪಲಾಯನ ಮಾಡುವ  ಮತ್ತು 2014 ರ ಡಿಸೆಂಬರ್ 31  ಅಥವಾ ದಕ್ಕೂ ಮೊದಲು ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಪಾರ್ಸಿಗಳು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಸಿಎಎ ಪೌರತ್ವ ನೀಡುತ್ತದೆ.  ಆದರೆ ಮುಸ್ಲಿಮರಿಗೆ ಇದರಲ್ಲಿ ಸ್ಥಾನ ಕಲ್ಪಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT