ಕೇರಳ: ಸಿಎಎ ವಿರುದ್ಧ 620 ಕಿಮೀ ಉದ್ದದ ಮಾನವ ಸರಪಳಿ; ನವ ವಿವಾಹಿತರು, ಸಿಎಂ ಭಾಗಿ 
ದೇಶ

ಕೇರಳ: ಸಿಎಎ ವಿರುದ್ಧ 620 ಕಿಮೀ ಉದ್ದದ ಮಾನವ ಸರಪಳಿ; ನವ ವಿವಾಹಿತರು, ಸಿಎಂ ಭಾಗಿ

ಕೇರಳದಲ್ಲಿ ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಎಲ್ ಡಿಎಫ್ ಪಕ್ಷ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸಿ 71ನೇ ಗಣರಾಜ್ಯೋತ್ಸವದಂದು 620 ಕಿಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು. 

ತಿರುವನಂತಪುರಂ: ಕೇರಳದಲ್ಲಿ ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಎಲ್ ಡಿಎಫ್ ಪಕ್ಷ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸಿ 71ನೇ ಗಣರಾಜ್ಯೋತ್ಸವದಂದು 620 ಕಿಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿತು. 

ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಮತ್ತು ಸಿಪಿಐ ರಾಜ್ಯ ಕಾರ್ಯದರ್ಶಿ ಕಾನಮ್ ರಾಜೇಂದ್ರನ್ ಉಪಸ್ಥಿತರಿದ್ದರು. ಸುಮಾರು 70 ಲಕ್ಷ ಜನರು ಮಾನವ ಸರಪಳಿಯಲ್ಲಿ ಪಾಲ್ಗೊಂಡರು. ಸಿಪಿಐ, ಎನ್ ಸಿಪಿ, ಜೆಡಿಎಸ್, ಜೆಡಿಯು ಮತ್ತು ಜೆಎಸ್ ಎಸ್ ಪಕ್ಷದ ಸದಸ್ಯರು ಪಾಲ್ಗೊಂಡಿದ್ದರು. ಕಾಸರಗೋಡಿನಿಂದ ಕಲಿಯಿಕ್ಕವಿಲಾದವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಮಾನವ ಸರಪಳಿ ಎಂದು ಗುರುತಿಸಿಕೊಂಡಿತು. 

ಹಲವು ಸಚಿವರು, ಸಂಸದರು ಮತ್ತು ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಮಾನವ ಸರಪಳಿಯನ್ನು ಸೇರ್ಪಡೆಗೊಂಡರು. ಇದು ರಾಜ್ಯದ 14 ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಿಸ್ತಾರಗೊಂಡಿತ್ತು. ಜೊತೆಗೆ, ರಾಜ್ಯಾದ್ಯಂತ 250 ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಾಯಿತು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT