ಶರ್ಜೀಲ್ ಇಮಾಮ್ 
ದೇಶ

ಪ್ರಚೋದನಾಕಾರಿ ಹೇಳಿಕೆ: ಹೋರಾಟಗಾರ ಶರ್ಜೀಲ್ ಇಮಾಮ್ ಮನೆ ಮೇಲೆ ಅಧಿಕಾರಿಗಳ ದಾಳಿ, ಸಂಬಂಧಿಕರು ವಶಕ್ಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಾಗೂ ಹೋರಾಟಗಾರ ಶರ್ಜೀಲ್ ಇಮಾಮ್ ಅವರ ಮನೆ ಮೇಲೆ ಕೇಂದ್ರೀಯ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಸಂಬಂಧಿಕರನ್ನು ವಶಕ್ಕೆ ಪಡೆದುಕೊಂಡದ್ದಾರೆಂದು ವರದಿಗಳು ತಿಳಿಸಿವೆ. 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಾಗೂ ಹೋರಾಟಗಾರ ಶರ್ಜೀಲ್ ಇಮಾಮ್ ಅವರ ಮನೆ ಮೇಲೆ ಕೇಂದ್ರೀಯ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಸಂಬಂಧಿಕರನ್ನು ವಶಕ್ಕೆ ಪಡೆದುಕೊಂಡದ್ದಾರೆಂದು ವರದಿಗಳು ತಿಳಿಸಿವೆ. 

ಬಿಹಾರ ರಾಜ್ಯದ ಪಾಟ್ನಾದಲ್ಲಿರುವ ಶರ್ಜೀಲ್ ಅವರ ನಿವಾಸದ ಮೇಲೆ ಸ್ಥಳೀಯ ಪೊಲೀಸರ ಜೊತೆಗೂಡಿ ಕೇಂದ್ರೀಯ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 

ಪೌರತ್ವ ಕಾಯ್ದೆ ಹಾಗೂ ಎನ್ಆರ್'ಸಿಯನ್ನು ವಿರೋಧಿರುವ ಭರದಲ್ಲಿ ಇಮಾಮ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದು, ಡಿ.13 ರಂದೂ ಕೂಡ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಲ್ಲಿ ಇದೇ ರೀತಿ ಉದ್ರಿಕ್ತಗೊಳಿಸುವ ಭಾಷಣ ಮಾಡಿದ್ದರು ಎಂದು ಹೇಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಇಮಾಮ್ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಇದಷ್ಟೇ ಅಲ್ಲದೆ, ಉತ್ತರಪ್ರದೇಶ ಹಾಗೂ ಅಸ್ಸಾಂನಲ್ಲಿಯೂ ಇಮಾಮ್ ವಿರುದ್ಧ ಪ್ರಕರಣ ದಾಖಲಾಗಿದೆ. 

ಇಮಾಮ್ ಅವರ ಮನೆ ಮೇಲೆ ದಾಳಿ ನಡೆಸಿರುವುದನ್ನು ಜೆಹನಾಬಾದ್ ಎಸ್'ಪಿ ಮನೀಷ್ ಕುಮಾರ್ ಅವರು ದೃಢಪಡಿಸಿದ್ದಾರೆ. ಆದರೆ, ಪ್ರಕರಣ ಕುರಿತ ಮತ್ತಷ್ಟು ಮಾಹಿತಿ ನೀಡಲು ನಿರಾಕರಿಸಿದ್ದಾರೆ. 

ಈ ನಡುವೆ ದಾಳಿ ಮೇಲೆ ಇಮಾಮ್ ಅವರ ಕುಟುಂಬದ ಮೂವರು ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಮಾಮ್ ಅವರಿಗೆ ಸಂಬಂಧಿಸಿದ ಕೆಲ ವಸ್ತು ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT