ಜಗನ್ ಮೋಹನ್ ರೆಡ್ಡಿ 
ದೇಶ

ವಿಧಾನಪರಿಷತ್ ರದ್ದು: ಆಂಧ್ರಪ್ರದೇಶ ಸಚಿವ ಸಂಪುಟ ಅನುಮೋದನೆ

13 ವರ್ಷಗಳ ಹಿಂದೆ ತಮ್ಮ ತಂದೆ ಮತ್ತೆ ಅಸ್ತಿತ್ವಕ್ಕೆ ತಂದಿದ್ದ ವಿಧಾನಪರಿಷತ್ ಅನ್ನು ರದ್ದುಗೊಳಿಸುವ ಕುರಿತಂತೆ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶ ಸಚಿವ ಸಂಪುಟ ಸಭೆ ಸೋಮವಾರ ಅನುಮೋದನೆ ನೀಡಿದೆ.

ಹೈದರಬಾದ್: 13 ವರ್ಷಗಳ ಹಿಂದೆ ತಮ್ಮ ತಂದೆ ಮತ್ತೆ ಅಸ್ತಿತ್ವಕ್ಕೆ ತಂದಿದ್ದ ವಿಧಾನಪರಿಷತ್ ಅನ್ನು ರದ್ದುಗೊಳಿಸುವ ಕುರಿತಂತೆ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶ ಸಚಿವ ಸಂಪುಟ ಸಭೆ ಸೋಮವಾರ ಅನುಮೋದನೆ ನೀಡಿದೆ. 

ವಿಧಾನ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ನಡೆದ ಚರ್ಚೆಯ ಮೇಲೆ ಗುರುವಾರ ಆಂಧ್ರದ ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಈ ವೇಲೆ ಸಿಎಂ ಜಗನ್ ಅವರು ಸ್ಪೀಕರ್ ಬಳಿ ವಿಧಾನ ಪರಿಷತ್ತನ್ನು ಉಳಿಸಿಕೊಳ್ಳಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚಿಸಲು ಸೋಮವಾರ ಅವಕಾಶ ಕೇಳಿದ್ದರು. ಇದೀಗ ವಿಧಾನ ಪರಿಷತ್ತನ್ನು ತೆಗೆದುಹಾಕಲು ಸಂಪುಟ ಅನುಮೋದನೆ ನೀಡಿದೆ ಎಂದು ಆಡಳಿತ ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ. 

ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಸೃಷ್ಟಿಸುವ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿತ್ತು. ಆದರೆ, ಜಗನ್ ಪಕ್ಷ ವೈಎಸ್ಸಾರ್ ಕಾಂಗ್ರೆಸ್ಸಿಗೆ ಬಹುಮತವಿಲ್ಲದ ಕಾರಣ ವಿಧಾನಪರಿಷತ್ ನಲ್ಲಿ ಆ ವಿಧೇಯಕ ಅಂಗೀಕಾರವಾಗಿರಲಿಲ್ಲ. ಬದಲಿಗೆ ಆಯ್ಕೆ ಸಮತಿಯ ಸುಪರ್ದಿಗೆ ಹೋಗಿತ್ತು. ಇದೇ ರೀತಿ ಜಗನ್ ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ವಿಧಾನ ಪರಿಷತ್ ನಲ್ಲಿ ತಡೆ ಒಡ್ಡಲಾಗುತ್ತಿದೆ. ಹೀಗಾಗಿ ಪರಿಷತ್ತನ್ನೇ ರದ್ದುಗೊಳಿಸಲು ಜಗನ್ ನಿರ್ಧರಿಸಿದ್ದರು. 

1985ರ ಮೇ 31ರಂದು ತೆಲುಗು ದೇಶಂ ಸಂಸ್ಥಾಪಕ ಎನ್.ಟಿ.ರಾಮರಾವ್ ಮುಖ್ಯಮಂತ್ರಿಯಾಗಿದ್ದಾಗ ಆಂಧ್ರ ವಿಧಾನ ಪರಿಷತ್ ನ್ನು ರದ್ದುಗೊಳಿಸಿದ್ದರು. ಈ ಸದನದಿಂದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದೆ ಎಂದು ಹೇಳಿದ್ದರು. 22 ವರ್ಷಗಳ ಬಳಿಕ ಅಂದರೆ 2017ರಲ್ಲಿ ರಾಜಶೇಖರ ರೆಡ್ಡಿಯವರು ವಿಧಾನಪರಿಷತ್ ನ್ನು ಮತ್ತೆ ಅಸ್ತಿತ್ವಕ್ಕೆ ತಂದಿದ್ದರು. ಇದೀಗ ಅವರ ಪುತ್ರ ರದ್ದುಗೊಳಿಸಿದ್ದಾರೆ. ಇದಕ್ಕೆ ತೆಲುಗು ದೇಶಂ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಅಧಿಕಾರಕ್ಕೆ ಬಂದರೆ ಪರಿಷತ್ತನ್ನು ಅಸ್ತಿತ್ವಕ್ಕೆ ತರುವುದಾಗಿ ಘೋಷಣೆ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT